ಬ್ರೇಕಿಂಗ್ ನ್ಯೂಸ್
01-09-23 12:44 pm Mangalore Correspondent ಕರಾವಳಿ
ಮಂಗಳೂರು, ಸೆ.1: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ಸ್ವರಾಜ್(24) ನಿನ್ನೆ ಬೆಳಗ್ಗೆ ತನ್ನ ಮನೆಯ ಬಳಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಲೋನ್ ಆ್ಯಪ್ ನಿಂದ 'Baby for sale' ಅಂತ ಕಿರುಕುಳ ನೀಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ವಾಟ್ಸಾಪ್ ನಲ್ಲಿ ಅಕ್ಕನ ಮಗುವಿನ ಫೋಟೊ ಹಾಕಿದ್ದ ಸ್ವರಾಜ್ ಗೆ ಅದೇ ಫೋಟೊ ಮುಂದಿಟ್ಟು ಕಿರುಕುಳ ನೀಡಲಾಗಿದೆ. ಮಗುವಿನ ಫೋಟೋವನ್ನು 'Baby for sale' ಅಂತ ಎಡಿಟ್ ಮಾಡಿ ಆತನ ಸ್ನೇಹಿತರು ಮತ್ತು ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿದ್ದವರಿಗೆಲ್ಲ ಫಾರ್ವರ್ಡ್ ಮಾಡಲಾಗಿತ್ತು.
ಸ್ವರಾಜ್ ಮೊಬೈಲ್ ಕಾಂಟ್ಯಾಕ್ಟ್ ಲಿಸ್ಟನ್ನು ನಕಲು ಮಾಡಿದ್ದ ಲೋನ್ ಆ್ಯಪ್ ನವರು ಮಗುವಿನ ಫೋಟೋವನ್ನೇ ನಕಲಿಸಿ ಮಗು ಮಾರಾಟಕ್ಕಿದೆ ಎಂದು ಹೇಳಿ ಫಾರ್ವರ್ಡ್ ಮಾಡಿದ್ದರು. ಇದರಿಂದ ತೀವ್ರ ನೊಂದಿದ್ದ ಸ್ವರಾಜ್ ಬ್ಲಾಕ್ ಮೇಲ್ ಒಳಗಾಗಿದ್ದರು. ಒತ್ತಡ ತಡೆಯಲಾಗದೇ ಆ.30 ರಂದು ಸ್ವರಾಜ್ 30 ಸಾವಿರ ರೂ. ಹಣವನ್ನು ಕಟ್ಟಿದ್ದರು ಎನ್ನಲಾಗಿದೆ. ಆ.31 ರಂದು ಮಧ್ಯಾಹ್ನ 2 ಗಂಟೆ ಒಳಗೆ ಉಳಿದ ಹಣ ಬಡ್ಡಿ ಸಹಿತ ನೀಡುವಂತೆ ಡೆಡ್ ಲೈನ್ ನೀಡಿದ್ದರು. ಇದರ ನಡುವಲ್ಲೇ ಹಿಂಸೆ ತಾಳಲಾರದೆ ಸ್ವರಾಜ್ ನಿನ್ನೆ ಬೆಳಗ್ಗೆ ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯದ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು ಲೋನ್ ಆ್ಯಪ್ ಕಿರುಕುಳದಿಂದಲೇ ಯುವಕ ಸಾವಿಗೆ ಶರಣಾದ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ.
In a major twist to the suicide case of Dakshina Kannada district-level youth kabaddi player Swaraj, it is suspected that she committed suicide after being harassed by the loan app. Swaraj (24), a resident of Puduvettu village in Belthangady taluk, committed suicide by hanging herself near her house yesterday morning. During the investigation, it came to light that he was harassed by the loan app as 'Baby for sale'.
21-08-25 06:24 pm
Bangalore Correspondent
"ಧರ್ಮದ ಉಳಿವಿಗಾಗಿ ಧರ್ಮ ಯುದ್ಧ" ; ರಾಜ್ಯದ ಎಲ್ಲ ವ...
21-08-25 06:02 pm
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 09:35 pm
HK News Desk
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm