ಬ್ರೇಕಿಂಗ್ ನ್ಯೂಸ್
01-09-23 12:44 pm Mangalore Correspondent ಕರಾವಳಿ
ಮಂಗಳೂರು, ಸೆ.1: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ಸ್ವರಾಜ್(24) ನಿನ್ನೆ ಬೆಳಗ್ಗೆ ತನ್ನ ಮನೆಯ ಬಳಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಲೋನ್ ಆ್ಯಪ್ ನಿಂದ 'Baby for sale' ಅಂತ ಕಿರುಕುಳ ನೀಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ವಾಟ್ಸಾಪ್ ನಲ್ಲಿ ಅಕ್ಕನ ಮಗುವಿನ ಫೋಟೊ ಹಾಕಿದ್ದ ಸ್ವರಾಜ್ ಗೆ ಅದೇ ಫೋಟೊ ಮುಂದಿಟ್ಟು ಕಿರುಕುಳ ನೀಡಲಾಗಿದೆ. ಮಗುವಿನ ಫೋಟೋವನ್ನು 'Baby for sale' ಅಂತ ಎಡಿಟ್ ಮಾಡಿ ಆತನ ಸ್ನೇಹಿತರು ಮತ್ತು ಕಾಂಟ್ಯಾಕ್ಟ್ ಲಿಸ್ಟ್ ನಲ್ಲಿದ್ದವರಿಗೆಲ್ಲ ಫಾರ್ವರ್ಡ್ ಮಾಡಲಾಗಿತ್ತು.

ಸ್ವರಾಜ್ ಮೊಬೈಲ್ ಕಾಂಟ್ಯಾಕ್ಟ್ ಲಿಸ್ಟನ್ನು ನಕಲು ಮಾಡಿದ್ದ ಲೋನ್ ಆ್ಯಪ್ ನವರು ಮಗುವಿನ ಫೋಟೋವನ್ನೇ ನಕಲಿಸಿ ಮಗು ಮಾರಾಟಕ್ಕಿದೆ ಎಂದು ಹೇಳಿ ಫಾರ್ವರ್ಡ್ ಮಾಡಿದ್ದರು. ಇದರಿಂದ ತೀವ್ರ ನೊಂದಿದ್ದ ಸ್ವರಾಜ್ ಬ್ಲಾಕ್ ಮೇಲ್ ಒಳಗಾಗಿದ್ದರು. ಒತ್ತಡ ತಡೆಯಲಾಗದೇ ಆ.30 ರಂದು ಸ್ವರಾಜ್ 30 ಸಾವಿರ ರೂ. ಹಣವನ್ನು ಕಟ್ಟಿದ್ದರು ಎನ್ನಲಾಗಿದೆ. ಆ.31 ರಂದು ಮಧ್ಯಾಹ್ನ 2 ಗಂಟೆ ಒಳಗೆ ಉಳಿದ ಹಣ ಬಡ್ಡಿ ಸಹಿತ ನೀಡುವಂತೆ ಡೆಡ್ ಲೈನ್ ನೀಡಿದ್ದರು. ಇದರ ನಡುವಲ್ಲೇ ಹಿಂಸೆ ತಾಳಲಾರದೆ ಸ್ವರಾಜ್ ನಿನ್ನೆ ಬೆಳಗ್ಗೆ ಮನೆಯ ಬಳಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃತ್ಯದ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದು ಲೋನ್ ಆ್ಯಪ್ ಕಿರುಕುಳದಿಂದಲೇ ಯುವಕ ಸಾವಿಗೆ ಶರಣಾದ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ.
In a major twist to the suicide case of Dakshina Kannada district-level youth kabaddi player Swaraj, it is suspected that she committed suicide after being harassed by the loan app. Swaraj (24), a resident of Puduvettu village in Belthangady taluk, committed suicide by hanging herself near her house yesterday morning. During the investigation, it came to light that he was harassed by the loan app as 'Baby for sale'.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm