ಬ್ರೇಕಿಂಗ್ ನ್ಯೂಸ್
03-09-23 09:45 pm Mangalore Correspondent ಕರಾವಳಿ
ಮಂಗಳೂರು, ಸೆ.3: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ, ಲೇಖಕ, ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿರುವ ಉನ್ನತ ಶಿಕ್ಷಣ ಅಕಾಡೆಮಿ ರಾಜ್ಯದ ಉನ್ನತ ಶಿಕ್ಷಣದ ನೀತಿ ನಿರೂಪಣೆಯನ್ನು ಸಿದ್ಧಗೊಳಿಸುವಲ್ಲಿ ಸರಕಾರಕ್ಕೆ ಸಲಹೆ, ಮಾರ್ಗಸೂಚಿಗಳನ್ನು ನೀಡುವ ಅತ್ಯುನ್ನತ ಸಂಸ್ಥೆಯಾಗಿದೆ.
ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ ತಜ್ಞರಾಗಿದ್ದಾರೆ.
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರಾಗಿ, ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.
ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು ವಿಜಯ ಕರ್ನಾಟಕ, ಕನ್ನಡ ಪ್ರಭ ಪತ್ರಿಕೆಯ ಅಂಕಣಗಾರರಾಗಿ, ಪ್ರಜಾವಾಣಿ ಪತ್ರಿಕೆಯ ಲೇಖಕರಾಗಿ ನಿರಂತರ ಬರವಣಿಗೆಯಲ್ಲಿ ತೊಡಗಿಸಿಕೊಂಡವರು. ರಾಜ್ಯದ ವಿವಿಧ ಟಿ.ವಿ. ಮಾಧ್ಯಮಗಳಲ್ಲಿ ವಿಚಾರ ಮಂಡನೆ ಮಾಡುತ್ತಿರುವರಾಗಿದ್ದಾರೆ. ಮೂಲತಃ ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ ಅವರು, ಸೈಂಟ್ ಫಿಲೋಮಿನಾ ಹೈಸ್ಕೂಲ್ ಹಾಗೂ ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎಂ.ಕಾಂ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು. ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದರು.
Mangalore Chandra poojari appointed as state higher education academy director of Karnataka.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm