ಬ್ರೇಕಿಂಗ್ ನ್ಯೂಸ್
04-09-23 07:12 pm Udupi Correspondent ಕರಾವಳಿ
ಉಡುಪಿ, ಸೆ.4: ಕಾಂತಾರ ಚಿತ್ರ ಸಂಪೂರ್ಣ ದೈವ ಪ್ರೇರಣೆಯಿಂದಲೇ ಆಗಿರುವುದು, ನಾನು ಮಾಡಿದ್ದಲ್ಲ. ದೈವದ ಬಲದಿಂದಲೇ ಆ ಚಿತ್ರ ಹಿಟ್ ಆಗಿರುವುದು. ದೈವದ ಚಾಕರಿ ಮಾಡುವ ಪಾಣಾರ, ನಲಿಕೆ ಸಮುದಾಯದ ಎಲ್ಲರಿಗೂ ನಮಿಸುತ್ತೇನೆ. ಪಂಜುರ್ಲಿ ದೈವದ ಸಿನಿಮಾ ಮಾಡುವ ಮೂಲಕ ದೈವದ ಸೇವೆ ಮಾಡುವ ಅವಕಾಶ ನನಗೂ ಸಿಕ್ಕಿದೆ. ಆಮೂಲಕ ನಿಮ್ಮ ಸಮುದಾಯಕ್ಕೇ ಸೇರಿಕೊಂಡಿದ್ದೇನೆ. ಮುಂದೊಂದು ಜನ್ಮ ಇದ್ದರೆ ಪಾಣಾರ ಸಮುದಾಯದಲ್ಲೇ ಹುಟ್ಟಿ ದೈವದ ಚಾಕರಿ ಮಾಡಲು ಬಯಸುತ್ತೇನೆ ಎಂದು ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಪಾಣಾರ ಯಾನೆ ನಲಿಕೆಯವರ ಜಿಲ್ಲಾ ಸೇವಾ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಮೆರಿಕದ ಮ್ಯೂಸಿಯಂನಲ್ಲಿ ಪಂಜುರ್ಲಿ ದೈವದ ಅತ್ಯಾಕರ್ಷಕ ಮೊಗ ಇದೆ. ಅಮೆರಿಕ ಅನ್ನುವುದು ನಮ್ಮ ಸಂಸ್ಕೃತಿಗೆ ತದ್ವಿರುದ್ಧ ಇರುವ ಜಾಗ. ಅಂಥ ಜಾಗದಲ್ಲಿ ನಾವು ನಂಬುವ ಪಂಜುರ್ಲಿ ದೈವದ ಮೊಗ ಇದೆಯಂದ್ರೆ ನಾವೆಲ್ಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯವರು ಖುಷಿ ಪಡಬೇಕು.


ನಾನು ಅಂಥ ದೊಡ್ಡ ನಟ, ನಿರ್ದೇಶಕ ಅಲ್ಲ. ದೊಡ್ಡ ಫ್ಯಾನ್ ವರ್ಗವನ್ನು ಇಟ್ಟುಕೊಂಡವನೂ ಅಲ್ಲ. ಒಂದೆರಡು ಚಿತ್ರದಲ್ಲಿ ನಟಿಸಿ, ನಿರ್ದೇಶನ ಮಾಡಿದ್ದೇನೆ ಅಷ್ಟೇ. ಆದರೆ ಈ ಮಟ್ಟದ ಯಶಸ್ಸು ಸಿಕ್ಕಿದ್ದಕ್ಕೆ ದೈವದ ಆಶೀರ್ವಾದವೇ ಕಾರಣ ಅಂತೇನೆ. ದೈವಗಳನ್ನು ನಂಬದವರಿಗೂ ಅವುಗಳ ಶಕ್ತಿಯ ಬಗ್ಗೆ ನಾನೇ ನಿದರ್ಶನ ಎಂದು ಹೇಳುತ್ತೇನೆ. ದೈವದ ಶಕ್ತಿಯನ್ನು ಪ್ರಪಂಚದ ಎತ್ತರಕ್ಕೆ ತೋರಿಸಲು ಸಾಧ್ಯವಾಗಿದ್ದು ದೈವದ ಶಕ್ತಿಯ ಕಾರಣದಿಂದ. ತುಳುನಾಡಿನ ಸಾಕಷ್ಟು ಇತಿಹಾಸವನ್ನು ಓದಿಕೊಂಡಿದ್ದೇನೆ. ಸಾವಿರಾರು ವರ್ಷಗಳ ಇತಿಹಾಸ ನಮ್ಮ ಜಿಲ್ಲೆಗೆ ಇದೆ. ಇಲ್ಲಿ ದೇವಸ್ಥಾನಗಳು ಬರುವ ಮೊದಲೇ ಇಲ್ಲಿ ದೈವಸ್ಥಾನಗಳು ಇದ್ದವು ಎನ್ನುವ ವಿಚಾರ ಕಂಡುಬರುತ್ತದೆ. ಇಲ್ಲಿ ದೈವಾರಾಧನೆ, ಪ್ರಕೃತಿಯ ಆರಾಧನೆ ಇತ್ತು. ಈ ಸಮುದಾಯದ ಜನರು ಸಾವಿರಾರು ವರ್ಷಗಳಿಂದ ಈ ಕಲೆಯನ್ನು ಮಾಡಿಕೊಂಡು ಬಂದಿದ್ದಾರೆ. ಈ ಕಲೆ ಎಲ್ಲರಿಗೂ ಸಿದ್ಧಿಸುವಂಥದ್ದಲ್ಲ. ಒಂದಷ್ಟು ಮಂದಿ ಮಾತ್ರ ಪರಿಪೂರ್ಣ ಸಾಧನೆ ಮಾಡಲು ಸಾಧ್ಯ.
ಚಿತ್ರದ ಯಶಸ್ಸಿನ ಬಳಿಕ ನನ್ನ ಪತ್ನಿಯ ಸಲಹೆಯಂತೆ ಒಂದು ಟ್ರಸ್ಟ್ ಮಾಡಿಕೊಂಡಿದ್ದೇವೆ. ಈ ಟ್ರಸ್ಟ್ ಮೂಲಕ ಇಡೀ ಸಮಾಜಕ್ಕೆ ಬೆಂಬಲ ಕೊಡುವ, ಸಮಾಜಮುಖಿ ಕೆಲಸ ಮಾಡಲು ಮುಂದಾಗಿದ್ದೇವೆ. ನಿಮ್ಮ ಸಮುದಾಯದಲ್ಲಿ ಓದುವಂಥ ಮಕ್ಕಳಿಗೆ ಶಿಕ್ಷಣ ಕೊಡುವುದಕ್ಕೆ ನಾವು ಬೆಂಬಲ ನೀಡುತ್ತೇವೆ. ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಿಕ್ಷಣದ ಜೊತೆಗೆ ನಮ್ಮ ಆಚಾರ, ವಿಚಾರ ಬೆಳೆಸಿಕೊಂಡು ಹೋಗಬೇಕಾಗಿದೆ. ನಿಮ್ಮ ಸಂಘದ ಬೇಡಿಕೆಯಂತೆ ಸಮುದಾಯ ಭವನ ನಿರ್ಮಾಣಕ್ಕೆ ಏನೇನು ಬೇಕು, ಅದಕ್ಕಾಗಿ ಜೊತೆಗೆ ನಿಲ್ಲುತ್ತೇನೆ. ಸರಕಾರದ ಜೊತೆಗೆ ನಿಂತು ಈ ಕೆಲಸ ಮಾಡಿಸುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಆಶಿಸುತ್ತೇನೆ ಎಂದು ಹೇಳಿದರು.
If there is any rebirth, I wish to be born in Panara community says Rishab Shetty in Udupi. He was speaking at the annual day celebrations of Udupi District Panara Sangha under the aegis of Udupi District Pana Yane Nalikeyavara Samaja Seva Sangha and Paryaya Krishnapura Mutt at Sri Krishna Mutt Rajangana in Udupi. Kantara movie revolved around the life of the Panara community and Daivaradhana (spirit worship).
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm