ಬ್ರೇಕಿಂಗ್ ನ್ಯೂಸ್
05-09-23 02:16 pm Mangalore Correspondent ಕರಾವಳಿ
ಮಂಗಳೂರು, ಸೆ.5: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಶಾಸಕರನ್ನು ಕುಳ್ಳಿರಿಸಿ ಮನವಿಯನ್ನು ಕೇಳಿದ ಸಿದ್ದರಾಮಯ್ಯ, ಸೌಜ್ಯಾ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶ ಇರುವುದಿಲ್ಲ. ಕೋರ್ಟ್ ಈಗಾಗಲೇ ಪ್ರಕರಣದ ಬಗ್ಗೆ ತೀರ್ಪು ನೀಡಿದೆ. ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಯನ್ನು ಹಿಡಿದು ಕೊಟ್ಟಿದ್ದಾರೆ. ಆದರೆ ಆರೋಪದ ಬಗ್ಗೆ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಕೋರ್ಟ್ ಖುಲಾಸೆ ಮಾಡಿದೆ. ಹೀಗಿದ್ದ ಮೇಲೆ ನಾವು ಮರು ತನಿಖೆ ಮಾಡೋಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ನನ್ನನ್ನು ಭೇಟಿಯಾಗಲು ಬಂದ ಸೌಜನ್ಯಾ ಪೋಷಕರಿಗೂ ತಿಳಿಸಿದ್ದೇನೆ. ನಾನು ಈ ಬಗ್ಗೆ ಕಾನೂನು ಸಲಹೆಯನ್ನು ಕೇಳಿದ್ದೇನೆ. ಸೌಜನ್ಯಾ ಪೋಷಕರು ಕೋರ್ಟಿಗೆ ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಇರುತ್ತದೆ. ನೀವುಗಳು ಬಂದಿರುವುದರಿಂದ ಮತ್ತೊಮ್ಮೆ ಕಾನೂನು ಸಲಹೆ ಕೇಳುತ್ತೇನೆ. ಮರು ತನಿಖೆಗೆ ಅವಕಾಶ ಇದ್ದರೆ ಆದೇಶ ಮಾಡಿಸುತ್ತೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾಗಿ ಬಿಜೆಪಿ ನಾಯಕರು ತಿಳಿಸಿದ್ದಾರೆ.
ಶಾಸಕರ ನಿಯೋಗದಲ್ಲಿ ಸುನಿಲ್ ಕುಮಾರ್, ಭರತ್ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ ಇದ್ದರು.
BJP leaders meet CM Siddaramaiah to reinvestigate the case of Soujanya rape and murder.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm