ಬ್ರೇಕಿಂಗ್ ನ್ಯೂಸ್
05-09-23 09:06 pm Mangalore Correspondent ಕರಾವಳಿ
ಮಂಗಳೂರು, ಸೆ.5 : ನಗರದಲ್ಲಿ ವ್ಯಾಪಕವಾಗಿ ಹರಡಿದ್ದ ಮಾದಕ ವಸ್ತುಗಳ ಮಾರಾಟ ಜಾಲ ಮತ್ತು ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ನಿಗ್ರಹಿಸಿ ಸ್ವಚ್ಛ ಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಅವರನ್ನು ದಿಢೀರ್ ಆಗಿ ವರ್ಗಾಯಿಸಿರುವುದು ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯಕ್ಕೆ ಹೊಡೆತ ನೀಡಿದಂತಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಕಿಡಿಕಾರಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭರತ್ ಶೆಟ್ಟಿ, ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಬಾರದು ಎನ್ನುವ ದೃಢ ಸಂಕಲ್ಪದೊಂದಿಗೆ ಹೋರಾಡುತ್ತಿದ್ದ ಕಮಿಷನರ್ ಅವರನ್ನು ಕೇವಲ ಐದೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ವರ್ಗಾವಣೆ ಮಾಡಿದೆ. ಈಮೂಲಕ ಡ್ರಗ್ಸ್ ರೀತಿಯ ಅಕ್ರಮ ಚಟುವಟಿಕೆಗಳಿಗೆ ಪರೋಕ್ಷವಾಗಿ ರಾಜ್ಯ ಸರ್ಕಾರ ಕುಮ್ಮಕ್ಕು ನೀಡುವಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಈ ರೀತಿಯ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಮತ್ತೆ ಮಾದಕ ವಸ್ತುಗಳ ಜಾಲ ತಲೆ ಎತ್ತಲಿದೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುವ ಸಾಧ್ಯತೆ ಇದ್ದು ಇದಕ್ಕೆಲ್ಲ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕು ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ. ಡ್ರಗ್ಸ್ ಜಾಲ ಮತ್ತೆ ಜಾಲ ಬಿಚ್ಚಿ, ಜನಸಾಮಾನ್ಯರಿಗೆ ಕಂಟಕವಾದಲ್ಲಿ ಬಿಜೆಪಿ ಪಕ್ಷದ ವತಿಯಿಂದಲೇ ಹೋರಾಟ ನಡೆಸಲಾಗುವುದು ಎಂದು ಹೇಳಿದ್ದಾರೆ.
Mangalore Police Commissioner Kuldeep Kumar Jain transfer, BJP MLA Bharath Shetty slams Congress. Says a honest officer who was tirelessly working to make Mangalore Drug free was transferred in just 5 months of posting.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm