ಬ್ರೇಕಿಂಗ್ ನ್ಯೂಸ್
05-09-23 09:51 pm Mangalore Correspondent ಕರಾವಳಿ
ಮಂಗಳೂರು, ಸೆ.5: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಹೊಸ ವಿಮಾನ ದಿನಂಪ್ರತಿ ಸಂಚಾರ ಮಾಡಲಿದೆ. ಇದರೊಂದಿಗೆ ಮಂಗಳೂರು- ಬೆಂಗಳೂರು ಡೈಲೀ ವಿಮಾನ ಸಂಖ್ಯೆ ಐದಕ್ಕೇರಿದರೆ, ಶನಿವಾರ ಆರು ವಿಮಾನಗಳು ಸಂಚಾರ ನಡೆಸಲಿವೆ.
ಸೆ.7ರಿಂದ ಇಂಡಿಗೋ ಸಂಸ್ಥೆಯ ವಿಮಾನ ಹೊಸತಾಗಿ ಇವರೆಡು ನಗರಗಳ ನಡುವೆ ಸಂಚಾರ ಆರಂಭಿಸಲಿದೆ. ಬೆಳಗ್ಗೆ 8.35ಕ್ಕೆ ಮಂಗಳೂರಿಗೆ ತಲುಪಲಿರುವ ಇಂಡಿಗೋ ವಿಮಾನ 9.10ಕ್ಕೆ ಮತ್ತೆ ಬೆಂಗಳೂರಿಗೆ ಹೊರಡಲಿದೆ. ಈಗಾಗಲೇ ಬೆಳಗ್ಗೆ 6.50ಕ್ಕೆ ಬೆಂಗಳೂರು ಮೂಲಕ ಪಾಟ್ನಾಕ್ಕೆ, 11.35ಕ್ಕೆ ಬೆಂಗಳೂರು ವಯಾ ಕೋಲ್ಕತ್ತಾಕ್ಕೆ ಸಂಚರಿಸುತ್ತದೆ. ಸಂಜೆ 4.25 ಮತ್ತು ರಾತ್ರಿ 9.50ಕ್ಕೆ ನೇರವಾಗಿ ಬೆಂಗಳೂರಿಗೆ ಸಂಚರಿಸುವ ಇಂಡಿಗೋ ವಿಮಾನಗಳಿವೆ. ಇದರ ಜೊತೆಗೆ ಹೊಸ ವಿಮಾನ ದಿನವೂ ಬೆಳಗ್ಗೆ 9.10ಕ್ಕೆ ಮಂಗಳೂರಿನಿಂದ ಬೆಂಗಳೂರು ಸಂಚಾರ ಮಾಡಲಿದೆ.
ಶನಿವಾರ ಆರನೇ ವಿಮಾನ ಮಂಗಳೂರಿನಿಂದ ಬೆಂಗಳೂರಿಗೆ ಸಂಚಾರ ಮಾಡಲಿದೆ. ಮಂಗಳೂರು- ಪುಣೆಗೆ ಹೋಗುವ ವಿಮಾನವನ್ನೇ ಹೆಚ್ಚುವರಿಯಾಗಿ ಬೆಂಗಳೂರಿನತ್ತ ಓಡಿಸಲು ನಿರ್ಧರಿಸಲಾಗಿದೆ. ಮಂಗಳವಾರ, ಗುರುವಾರ, ಭಾನುವಾರ ಮತ್ತು ಶನಿವಾರ ಸಂಜೆ 5.50ಕ್ಕೆ ವಿಮಾನ ಮಂಗಳೂರಿಗೆ ಬರಲಿದ್ದು, 6.35ಕ್ಕೆ ನಿರ್ಗಮನ ಆಗಲಿದೆ. ಶನಿವಾರ ಮಾತ್ರ ಬೆಂಗಳೂರಿನಿಂದ ಮಂಗಳೂರಿಗೆ ಇಂಡಿಗೋ ವಿಮಾನ ಬರಲಿದ್ದು, ಅದೇ ವಿಮಾನ 6.35ಕ್ಕೆ ಪುಣೆ ಹೊರಡಲಿದೆ.
ಇಂಡಿಗೋ ಸಂಸ್ಥೆಯ ಹೊಸ ವಿಮಾನ ಸಂಚಾರದಿಂದ ಮಂಗಳೂರು – ಬೆಂಗಳೂರು ಮತ್ತು ಮಂಗಳೂರು- ಪುಣೆ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಸೋಮವಾರದಿಂದ ಶುಕ್ರವಾರಕ್ಕೆ 38ರಿಂದ 40 ವಿಮಾನಗಳ ಸಂಚಾರ ಆಗಲಿದ್ದರೆ, ಅದೇ ಶನಿವಾರ ಮತ್ತು ಭಾನುವಾರ 40ರಿಂದ 42 ವಿಮಾನಗಳು ಸಂಚಾರ ನಡೆಸಲಿವೆ. ಇದಲ್ಲದೆ, ಮಂಗಳೂರು ಏರ್ಪೋರ್ಟಿನಿಂದ ಇತರ ಏರ್ ಸಂಸ್ಥೆಗಳ ಜೊತೆಗೂ ಸಂಪರ್ಕದಲ್ಲಿದ್ದು, ಮತ್ತಷ್ಟು ವಿಮಾನಗಳ ಸಂಚಾರ ಸದ್ಯದಲ್ಲೇ ಆಗಲಿದೆ ಎಂದು ಮಂಗಳೂರು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
The Mangaluru International Airport (MIA) is all set to get an additional daily flight during the weekdays and an additional flight on Saturday to Bengaluru from September 7. With these additional flights that IndiGo will operate till October 28, the number of daily flights to Bengaluru will go up to five during weekdays/Sundays and six on Saturdays. At present, IndiGo is operating all four flights daily to Bengaluru
27-06-25 02:46 pm
HK News Desk
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 04:56 pm
Mangalore Correspondent
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm