ಬ್ರೇಕಿಂಗ್ ನ್ಯೂಸ್
05-09-23 09:51 pm Mangalore Correspondent ಕರಾವಳಿ
ಮಂಗಳೂರು, ಸೆ.5: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಹೊಸ ವಿಮಾನ ದಿನಂಪ್ರತಿ ಸಂಚಾರ ಮಾಡಲಿದೆ. ಇದರೊಂದಿಗೆ ಮಂಗಳೂರು- ಬೆಂಗಳೂರು ಡೈಲೀ ವಿಮಾನ ಸಂಖ್ಯೆ ಐದಕ್ಕೇರಿದರೆ, ಶನಿವಾರ ಆರು ವಿಮಾನಗಳು ಸಂಚಾರ ನಡೆಸಲಿವೆ.
ಸೆ.7ರಿಂದ ಇಂಡಿಗೋ ಸಂಸ್ಥೆಯ ವಿಮಾನ ಹೊಸತಾಗಿ ಇವರೆಡು ನಗರಗಳ ನಡುವೆ ಸಂಚಾರ ಆರಂಭಿಸಲಿದೆ. ಬೆಳಗ್ಗೆ 8.35ಕ್ಕೆ ಮಂಗಳೂರಿಗೆ ತಲುಪಲಿರುವ ಇಂಡಿಗೋ ವಿಮಾನ 9.10ಕ್ಕೆ ಮತ್ತೆ ಬೆಂಗಳೂರಿಗೆ ಹೊರಡಲಿದೆ. ಈಗಾಗಲೇ ಬೆಳಗ್ಗೆ 6.50ಕ್ಕೆ ಬೆಂಗಳೂರು ಮೂಲಕ ಪಾಟ್ನಾಕ್ಕೆ, 11.35ಕ್ಕೆ ಬೆಂಗಳೂರು ವಯಾ ಕೋಲ್ಕತ್ತಾಕ್ಕೆ ಸಂಚರಿಸುತ್ತದೆ. ಸಂಜೆ 4.25 ಮತ್ತು ರಾತ್ರಿ 9.50ಕ್ಕೆ ನೇರವಾಗಿ ಬೆಂಗಳೂರಿಗೆ ಸಂಚರಿಸುವ ಇಂಡಿಗೋ ವಿಮಾನಗಳಿವೆ. ಇದರ ಜೊತೆಗೆ ಹೊಸ ವಿಮಾನ ದಿನವೂ ಬೆಳಗ್ಗೆ 9.10ಕ್ಕೆ ಮಂಗಳೂರಿನಿಂದ ಬೆಂಗಳೂರು ಸಂಚಾರ ಮಾಡಲಿದೆ.

ಶನಿವಾರ ಆರನೇ ವಿಮಾನ ಮಂಗಳೂರಿನಿಂದ ಬೆಂಗಳೂರಿಗೆ ಸಂಚಾರ ಮಾಡಲಿದೆ. ಮಂಗಳೂರು- ಪುಣೆಗೆ ಹೋಗುವ ವಿಮಾನವನ್ನೇ ಹೆಚ್ಚುವರಿಯಾಗಿ ಬೆಂಗಳೂರಿನತ್ತ ಓಡಿಸಲು ನಿರ್ಧರಿಸಲಾಗಿದೆ. ಮಂಗಳವಾರ, ಗುರುವಾರ, ಭಾನುವಾರ ಮತ್ತು ಶನಿವಾರ ಸಂಜೆ 5.50ಕ್ಕೆ ವಿಮಾನ ಮಂಗಳೂರಿಗೆ ಬರಲಿದ್ದು, 6.35ಕ್ಕೆ ನಿರ್ಗಮನ ಆಗಲಿದೆ. ಶನಿವಾರ ಮಾತ್ರ ಬೆಂಗಳೂರಿನಿಂದ ಮಂಗಳೂರಿಗೆ ಇಂಡಿಗೋ ವಿಮಾನ ಬರಲಿದ್ದು, ಅದೇ ವಿಮಾನ 6.35ಕ್ಕೆ ಪುಣೆ ಹೊರಡಲಿದೆ.
ಇಂಡಿಗೋ ಸಂಸ್ಥೆಯ ಹೊಸ ವಿಮಾನ ಸಂಚಾರದಿಂದ ಮಂಗಳೂರು – ಬೆಂಗಳೂರು ಮತ್ತು ಮಂಗಳೂರು- ಪುಣೆ ನಡುವೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಸೋಮವಾರದಿಂದ ಶುಕ್ರವಾರಕ್ಕೆ 38ರಿಂದ 40 ವಿಮಾನಗಳ ಸಂಚಾರ ಆಗಲಿದ್ದರೆ, ಅದೇ ಶನಿವಾರ ಮತ್ತು ಭಾನುವಾರ 40ರಿಂದ 42 ವಿಮಾನಗಳು ಸಂಚಾರ ನಡೆಸಲಿವೆ. ಇದಲ್ಲದೆ, ಮಂಗಳೂರು ಏರ್ಪೋರ್ಟಿನಿಂದ ಇತರ ಏರ್ ಸಂಸ್ಥೆಗಳ ಜೊತೆಗೂ ಸಂಪರ್ಕದಲ್ಲಿದ್ದು, ಮತ್ತಷ್ಟು ವಿಮಾನಗಳ ಸಂಚಾರ ಸದ್ಯದಲ್ಲೇ ಆಗಲಿದೆ ಎಂದು ಮಂಗಳೂರು ಏರ್ಪೋರ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
The Mangaluru International Airport (MIA) is all set to get an additional daily flight during the weekdays and an additional flight on Saturday to Bengaluru from September 7. With these additional flights that IndiGo will operate till October 28, the number of daily flights to Bengaluru will go up to five during weekdays/Sundays and six on Saturdays. At present, IndiGo is operating all four flights daily to Bengaluru
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm