ಬ್ರೇಕಿಂಗ್ ನ್ಯೂಸ್
05-09-23 10:12 pm Mangalore Correspondent ಕರಾವಳಿ
ಮಂಗಳೂರು, ಸೆ.6: ಪ್ರಧಾನಿ ಮೋದಿಯವರ ಅಚ್ಛೇದಿನ್ ಬಡ ಜನರಿಗೆ ಬಂದಿಲ್ಲ, ಬಿಜೆಪಿ ನಾಯಕರಿಗಷ್ಟೆ ಬಂದಿದೆ. ಬಿಜೆಪಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸಂಪೂರ್ಣ ನಿರ್ಮೂಲನೆ ಆಗಲಿದೆ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಲ್ಲಿಕಟ್ಟೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಾರ್ಯಕರ್ತರ ದುಡಿಮೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಅವರನ್ನು ಗುರುತಿಸಿ ಉತ್ತಮ ಸ್ಥಾನಮಾನ ನೀಡಬೇಕು. ಜನರು ನಂಬಿ ನಮ್ಮನ್ನು ಆರಿಸಿದ್ದಾರೆ. ಅದರಂತೆ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬಿಜೆಪಿ ಅಧಿಕಾರವಧಿಯಲ್ಲಿ ಅಲ್ಪಸಂಖ್ಯಾತರಿಗಿದ್ದ ಪ್ರಮುಖ ಯೋಜನೆಗಳನ್ನು ಕಡಿತಗೊಳಿಸಲಾಗಿದೆ. ಬಿಜೆಪಿ ಸಾಧನೆ ತೋರಿಸಿ ಮತ ಕೇಳುವುದಿಲ್ಲ. ಬದಲಾಗಿ ಜಾತಿ, ಧರ್ಮದ ಮಧ್ಯೆ ಒಡಕನ್ನುಂಟು ಮಾಡಿ ಮತ ಕೇಳುತ್ತದೆ. ಇವರ ಸಾಧನೆ ಶೂನ್ಯ. ಹಿಂದು- ಮುಸ್ಲಿಂ ಮಧ್ಯೆ ದ್ವೇಷ ಎಬ್ಬಿಸಿ ಬಿಜೆಪಿ ತನ್ನ ಬೇಳೆ ಬೇಯಿಸುತ್ತದೆ. ಆದರೆ, ಕಾಂಗ್ರೆಸ್ ತನ್ನ ಸಾಧನೆ ತೋರಿಸಿ ಅಧಿಕಾರಕ್ಕೆ ಬಂದಿದೆ ಎಂದು ತಿಳಿಸಿದರು.


ಚುನಾವಣೆ ದೃಷ್ಟಿಯಿಂದ ಗ್ಯಾಸ್ ಬೆಲೆ ಇಳಿಕೆ ಮಾಡಲಾಗಿದ್ದು, ಚುನಾವಣೆ ಬಳಿಕ ಹೆಚ್ಚಾಗಲಿದೆ. ನಮ್ಮ ಭಾಗದ ಜನರಿಗೆ ಬಿಜೆಪಿಯ ಬಗ್ಗೆ ಅರ್ಥವಾಗಿದೆ. ಈ ಭಾಗದ ಜನರಿಗೆ ಮುಂದೆ ಅರ್ಥ ಆಗಲಿದೆ ಎಂದ ಜಮೀರ್, ಮುಂದಿನ ಲೋಕಸಭೆ, ಸ್ಥಳೀಯಾಡಳಿತ ಚುನಾವಣೆಗೆ ಕಾರ್ಯಕರ್ತರು, ನಾಯಕರು ಕಾರ್ಯ ಪ್ರವೃತ್ತರಾಗಿ ದುಡಿಯಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಪೌರಾಡಳಿತ, ಹಜ್ ಸಚಿವ ರಹೀಂ ಖಾನ್ ಮಾತನಾಡಿದರು. ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಐವನ್ ಡಿಸೋಜ, ಹಿರಿಯರಾದ ಕಣಚೂರ್ ಮೋನು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೆ.ಎ.ಬಾವ, ಇನಾಯತ್ ಅಲಿ, ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಭಾಸ್ಕರ್.ಕೆ, ಮುಖಂಡರಾದ ಲುಕ್ಮಾನ್ ಬಂಟ್ವಾಳ್, ಡಾ.ರಘು, ಜೋಕ್ಕಿಂ ಡಿಸೋಜ, ಸುಹಾನ್ ಆಳ್ವ, ಲಾರೆನ್ಸ್ ಡಿಸೋಜ, ಅಬ್ಬಾಸ್ ಅಲಿ, ಶುಭಾಷ್ ಶೆಟ್ಟಿ ಕೊಳ್ನಾಡ್, ನಾರಾಯಣ್ ನಾಯ್ಕ್, ಎಂ.ಎಸ್. ಮಹಮ್ಮದ್, ಚೇತನ್ ಬೆಂಗ್ರೆ, ಟಿ.ಎಂ.ಶಹೀದ್, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ನಾಯಕರುಗಳು ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು. ಶಬ್ಬೀರ್.ಎಸ್ ವಂದಿಸಿದರು. ಕೆ.ಕೆ.ಶಾಹುಲ್ ಹಮೀದ್ ಕಾರ್ಯಕ್ರಮ ನಿರೂಪಿಸಿದರು.
Achhe din is only for BJP by modi not for the people slams Zameer Ahmed Khan in Mangalore.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am