ಬ್ರೇಕಿಂಗ್ ನ್ಯೂಸ್
06-09-23 11:46 am Mangalore Correspondent ಕರಾವಳಿ
ಮಂಗಳೂರು,ಸೆ.6: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ನಗರದ ವೆಲೆನ್ಸಿಯಾದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ.
ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಅವರ ಜೊತೆಗೆ ಸಚಿವರು ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.


ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೇ ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು. ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲೇ ಆರೋಪಿಸಿದರು.
ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ತರಾಟೆಗೆತ್ತಿಕೊಂಡಿದ್ದಲ್ಲದೆ, ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಅಲ್ಲದೆ, ಹಾಸ್ಟೆಲ್ ಉಸ್ತುವಾರಿ ಹೊಂದಿರುವ ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಗೆ ಶೋಕಾಸ್ ನೋಟಿಸ್ ನೀಡಲು ಸಚಿವರು ಸೂಚಿಸಿದರು.
Mangalore Zameer Ahmed inspects Minority department hostel at Kankandy, bad rooms and toilet turns Minister angry.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm