ಬ್ರೇಕಿಂಗ್ ನ್ಯೂಸ್
06-09-23 11:46 am Mangalore Correspondent ಕರಾವಳಿ
ಮಂಗಳೂರು,ಸೆ.6: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ನಗರದ ವೆಲೆನ್ಸಿಯಾದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ.
ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಅವರ ಜೊತೆಗೆ ಸಚಿವರು ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.


ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೇ ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು. ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲೇ ಆರೋಪಿಸಿದರು.
ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ತರಾಟೆಗೆತ್ತಿಕೊಂಡಿದ್ದಲ್ಲದೆ, ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ಅಧಿಕಾರಿಯನ್ನು ಅಮಾನತು ಮಾಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಅಲ್ಲದೆ, ಹಾಸ್ಟೆಲ್ ಉಸ್ತುವಾರಿ ಹೊಂದಿರುವ ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್ ಗೆ ಶೋಕಾಸ್ ನೋಟಿಸ್ ನೀಡಲು ಸಚಿವರು ಸೂಚಿಸಿದರು.
Mangalore Zameer Ahmed inspects Minority department hostel at Kankandy, bad rooms and toilet turns Minister angry.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm