ಬ್ರೇಕಿಂಗ್ ನ್ಯೂಸ್
06-09-23 07:19 pm Mangalore Correspondent ಕರಾವಳಿ
ಮಂಗಳೂರು, ಸೆ.6: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ನಡೆಯುವ ಹಿನ್ನೆಲೆಯಲ್ಲಿ ಧಾರ್ಮಿಕ ಆಚರಣೆ, ಮೆರವಣಿಗೆ ಇನ್ನಿತರ ಉತ್ಸವಗಳಲ್ಲಿ ಸಾವಿರಾರು ಜನರು ಸೇರುವುದರಿಂದ ಆಯಾ ಭಾಗದಲ್ಲಿ ಆಸುಪಾಸಿನ ಮದ್ಯದಂಗಡಿಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ವ್ಯಾಪ್ತಿಗಳಲ್ಲಿ ಆಯಾ ಭಾಗದ ಪೊಲೀಸ್ ವರಿಷ್ಠರ ಕೋರಿಕೆಯಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಸೆ.6ರಂದು ಕಂಕನಾಡಿ ವೆಲೆನ್ಸಿಯಾ ಜಂಕ್ಷನ್, ಬಂಟ್ಸ್ ಹಾಸ್ಟೆಲ್ ಆಸುಪಾಸಿನಲ್ಲಿ, ಉಳ್ಳಾಲ ಠಾಣೆ ವ್ಯಾಪ್ತಿಯ ಕುಂಪಲ, ತಲಪಾಡಿ ಆಸುಪಾಸಿನಲ್ಲಿ ಮದ್ಯದಂಗಡಿ ನಿಷೇಧ ಇರುತ್ತದೆ.
ಸೆ.7ರಂದು ಅತ್ತಾವರ ಕಟ್ಟೆ ಆಸುಪಾಸಿನಲ್ಲಿ, ಉರ್ವಾ ಸ್ಟೋರ್ ಜಂಕ್ಷನ್, ಅಶೋಕನಗರ ಜಂಕ್ಷನ್, ಉರ್ವಾ ಮೈದಾನ, ಬೊಕ್ಕಪಟ್ನ ಜಂಕ್ಷನ್, ಕದ್ರಿ ಕಂಬ್ಲ ಆಸುಪಾಸಿನ ಮಲ್ಲಿಕಟ್ಟೆಯ ಮದ್ಯದಂಗಡಿಗಳು, ವಾಮಂಜೂರು, ತಿರುವೈಲ್ ನಲ್ಲಿ ಮದ್ಯ ನಿಷೇಧ ಇರುತ್ತದೆ. ಅಲ್ಲದೆ, ಮರೋಳಿ, ಕುಲಶೇಖರ ಚೌಕಿ, ಸುದರ್ಶನ್ ನಗರ ಪಜೀರು, ಅಸೈಗೋಳಿ, ನೆತ್ತಿಲಪದವು, ತೊಕ್ಕೊಟ್ಟು, ಕೆಳಗಿನ ತಲಪಾಡಿ, ಪಂಜಿಮೊಗರು ಜಂಕ್ಷನ್, ಕಾವೂರು, ಮೂಡುಶೆಡ್ಡೆ ಜಂಕ್ಷನ್, ಕುಂಜತ್ತ್ ಬೈಲು, ಕುಳೂರು, ಪಕ್ಷಿಕೆರೆ- ಅತ್ತೂರು, ಮೂಡುಬಿದ್ರೆ ಪೇಟೆಯಲ್ಲಿರುವ ಮದ್ಯದಂಗಡಿಗಳು ಬಂದ್ ಆಗಲಿವೆ. ಸುರತ್ಕಲ್ ಇಡ್ಯಾ, ಕುಳಾಯಿ, ಜೋಕಟ್ಟೆ, ಕಳವಾರು, ಕೃಷ್ಣಾಪುರ- ಕಾಟಿಪಳ್ಳ, ಚಿತ್ರಾಪುರ, ಮುಕ್ಕ ವಠಾರದಲ್ಲಿ ಮದ್ಯ ನಿಷೇಧ ಇರಲಿದೆ.
ಇದೇ ರೀತಿ ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುತ್ತೂರು ನಗರ ಠಾಣೆ, ಪುತ್ತೂರು ಗ್ರಾಮಾಂತರ ಠಾಣೆ, ಉಪ್ಪಿನಂಗಡಿ ಠಾಣೆ, ಸುಳ್ಯ ಠಾಣೆ, ಬೆಳ್ಳಾರೆ ಠಾಣೆ ವ್ಯಾಪ್ತಿಯಲ್ಲಿ ಸೆ.7ರಿಂದ 9ರ ವರೆಗೆ ವಿವಿಧ ಕಡೆಗಳಲ್ಲಿ ನಡೆಯುವ ಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವದ ನಿಮಿತ್ತ ಆಯಾ ಭಾಗದಲ್ಲಿ ಮದ್ಯದಂಗಡಿ ನಿಷೇಧ ಇರಲಿದೆ.
Closure of all liquor shops to be closed in Dakshina Kannada and Mangalore over Mosaru Kudike.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm