ಬ್ರೇಕಿಂಗ್ ನ್ಯೂಸ್
09-11-20 11:04 am Mangalore Correspondent ಕರಾವಳಿ
ಮಂಗಳೂರು, ನವೆಂಬರ್ 09 : ವಯೋಸಹಜ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡುಬಿದ್ರೆ ಕ್ಷೇತ್ರದ ಮಾಜಿ ಶಾಸಕ ರತನ್ ಕುಮಾರ್ ಕಟ್ಟೆಮಾರ್(82) ನಿಧನರಾಗಿದ್ದಾರೆ.
ಮೂಲ್ಕಿ - ಮೂಡುಬಿದ್ರೆ ಕ್ಷೇತ್ರದಲ್ಲಿ 1967ರಿಂದ 1971ರ ಅವಧಿಗೆ ಸ್ವತಂತ್ರ ಪಕ್ಷದ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ರತನ್ ಕುಮಾರ್ ಕಟ್ಟೆಮಾರ್, ಮೂಡುಬಿದ್ರೆಯ ಎರಡನೇ ಶಾಸಕರೆನಿಸಿದ್ದರು. ಆಬಳಿಕ 1971ರಲ್ಲಿ ಸುರತ್ಕಲ್ ಕ್ಷೇತ್ರದಲ್ಲಿ ಸ್ಪರ್ಧಿಸಿ ರತನ್ ಕುಮಾರ್ ಪರಾಜಿತರಾಗಿದ್ದರು. ಜನಪ್ರತಿನಿಧಿಯಾಗಿ ದೇವರಾಜ ಅರಸು ಜಾರಿಗೆ ತಂದಿದ್ದ ಭೂ ಮಸೂದೆಯ ವಿರುದ್ಧ ದನಿಯೆತ್ತಿದ್ದ ಅವರು, ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬೇಡಿಕೆ ಇಟ್ಟು ಗಮನ ಸೆಳೆದಿದ್ದರು. ಶಾಸಕರಾಗಿ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಬೇಡಿಕೆ ಇಟ್ಟಿದ್ದು ಅದೇ ಮೊದಲು ಮತ್ತು ಅದೇ ಕೊನೆ. ಬೈಕ್, ಕಾರುಗಳಿಲ್ಲದ ಎಪ್ಪತ್ತರ ದಶಕದಲ್ಲಿ ರತನ್ ಕುಮಾರ್ ತಮ್ಮ ಜಾವಾ ಬೈಕ್ನಲ್ಲಿಯೇ ಬೆಂಗಳೂರು, ಮದ್ರಾಸ್, ತಿರುಪತಿ, ಕೊಚ್ಚಿ ಹೀಗೆ ದೂರದ ರಾಜ್ಯಗಳಿಗೂ ಸುತ್ತಾಡಿ ಗಮನ ಸೆಳೆದಿದ್ದರು.
1968ರಲ್ಲಿ ಮೈಸೂರಿನಲ್ಲಿ ಆನೆಗಳನ್ನು ಸೆರೆಹಿಡಿಯುವ ಖೆಡ್ಡಾದ ಕಾರ್ಯಾಚರಣೆ ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಫೈರಿಂಗ್ ಆಗಿದ್ದು ಅವರ ಎಡಕಣ್ಣಿಗೆ ಗಂಭೀರ ಹಾನಿಯಾಗಿತ್ತು. ಭೂಸೇನೆಯ ಸ್ಥಾಪಕ ಕಾರ್ಯದರ್ಶಿ, ರೈತ ಪರ ಭೂಮಾಲೀಕರ ಸಂಘಟನೆಯಲ್ಲಿ ತೊಡಗಿಕೊಂಡಿದ್ದ ಅವರು ಜಯಪ್ರಕಾಶ್ ನಾರಾಯಣರ ಚಳವಳಿಯಲ್ಲಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದ್ದರು.
1986ರ ಬಳಿಕ ಅಧ್ಯಾತ್ಮಿಕ ನೆಲೆಯಲ್ಲಿ ತೊಡಗಿಕೊಂಡು ಮಂಗಳೂರಿನ ತಮ್ಮ ನಿವಾಸದಲ್ಲಿ ದೇವಿ ಧರ್ಮಧೂತರೆಸಿಕೊಂಡು ಕಾರ್ಯ ನಿರತರಾಗಿದ್ದರು. ಮಾಜಿ ಶಾಸಕ ಕಟ್ಟೆಮಾರ್ ಅವರ ನಿಧನಕ್ಕೆ ಮೂಡುಬಿದಿರೆ ಜೈನಮಠದ ಭಟ್ಟಾರಕ ಶ್ರೀಗಳವರು ಸಂತಾಪ ವ್ಯಕ್ತಪಡಿದ್ದಾರೆ.
Moodbidri fomer Karnataka Minister Ratan Kumar Kattemar passes away at 82. He served as MLA from 1967 to 1972.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm