ಬ್ರೇಕಿಂಗ್ ನ್ಯೂಸ್
06-09-23 10:57 pm Mangalore Correspondent ಕರಾವಳಿ
ಮಂಗಳೂರು, ಸೆ.6: ಕೋವಿಡ್ ಬಳಿಕ ಮಂಗಳೂರು ನಗರದಲ್ಲಿ ಸಂಚಾರ ನಿಲ್ಲಿಸಿದ್ದ 13 ಸರಕಾರಿ ಬಸ್ ಗಳನ್ನು ಮರು ಜಾರಿಗೊಳಿಸಬೇಕೆಂದು ಕಾಂಗ್ರೆಸ್ ಜಿಲ್ಲಾ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ ನೀಡಿರುವ ಮನವಿಯನ್ನು ರಾಜ್ಯ ಸರಕಾರ ಪುರಸ್ಕರಿಸಿದೆ. ಸೆ.7ರಿಂದಲೇ ದಿನಕ್ಕೊಂದು ಬಸ್ಸಿನಂತೆ 13 ರೂಟ್ ಗಳಲ್ಲಿಯೂ ಸರಕಾರಿ ಬಸ್ ಇಳಿಸುವುದಾಗಿ ಮಂಗಳೂರು ಸಾರಿಗೆ ಡಿಪೋ ಅಧಿಕಾರಿ ರಾಜೇಶ್ ಶೆಟ್ಟಿ ತಿಳಿಸಿದ್ದಾರೆ.
ಇದರಂತೆ, ಶಕ್ತಿನಗರದಿಂದ ಸ್ಟೇಟ್ ಬ್ಯಾಂಕಿಗೆ ಸೆ.7ರಂದು ಬೆಳಗ್ಗೆ 9.45ಕ್ಕೆ ಹೊಸತಾಗಿ ಸರಕಾರಿ ಬಸ್ ಸಂಚಾರ ನಡೆಸಲಿದೆ. ಇದರ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾಡಲಿದ್ದಾರೆ. 13 ಬಸ್ ಗಳಲ್ಲಿ ಮಂಗಳೂರು ವಯಾ ಸುರತ್ಕಲ್ ನಿಂದ ಕಟೀಲು, ಮಂಗಳೂರಿನಿಂದ ಸೋಮೇಶ್ವರ, ಮಂಗಳೂರು ರೈಲ್ವೇ ಸ್ಟೇಶನ್ನಿಂದ ಬಜ್ಪೆ, ಸ್ಟೇಟ್ ಬ್ಯಾಂಕ್ ವೃತ್ತದಿಂದ ಶಕ್ತಿನಗರ, ಕುಂಜತ್ ಬೈಲ್, ಕಾಟಿಪಳ್ಳ, ಕೈಕಂಬ, ಪಿಲಿಕುಳ, ಮಂಗಳಪೇಟೆ, ಬಜಾಲ್ ಚರ್ಚ್, ಫೈಸಲ್ ನಗರ, ತಲಪಾಡಿ, ಕೀನ್ಯಾಕ್ಕೆ ಸರಕಾರಿ ಬಸ್ ಸಂಚಾರ ಇತ್ತು.
ಈ ಪೈಕಿ 11 ಬಸ್ ಗಳು ನರ್ಮ್ ಯೋಜನೆಯಡಿ ಮಂಗಳೂರು ನಗರಕ್ಕೆ ಮಂಜೂರಾಗಿದ್ದ ಸರಕಾರಿ ಬಸ್ಗಳಾಗಿದ್ದವು. ಒಟ್ಟು 22 ನರ್ಮ್ ಬಸ್ ಗಳಲ್ಲಿ ಕೋವಿಡ್ ಬಳಿಕ ಬಹುತೇಕ ಬಸ್ ಗಳನ್ನು ನಿಲ್ಲಿಸಲಾಗಿತ್ತು. ಇದೀಗ ರಾಜ್ಯ ಕಾಂಗ್ರೆಸ್ ಸರಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದೆ. ಎರಡು ತಿಂಗಳ ಹಿಂದೆಯೇ ಈ ಯೋಜನೆ ಆರಂಭಗೊಂಡಿದ್ದರೂ, ಮಂಗಳೂರು ನಗರದಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿರುವುದರಿಂದ ಇದರ ಲಾಭ ಮಂಗಳೂರಿನ ಮಂದಿಗೆ ಸಿಕ್ಕಿರಲಿಲ್ಲ. ಹೀಗಾಗಿ ನಿಂತು ಹೋಗಿದ್ದ ಈ ಹಿಂದೆ ಸಂಚಾರ ಮಾಡುತ್ತಿದ್ದ ಬಸ್ ಗಳನ್ನು ಮತ್ತೆ ಸಂಚರಿಸುವಂತೆ ಮಾಡಬೇಕೆಂದು ವಕೀಲರೂ ಆಗಿರುವ ಮನೋರಾಜ್ ರಾಜೀವ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವರಿಕೆ ಮಾಡಿದ್ದರು. ಅಲ್ಲದೆ, ಮುಖ್ಯಮಂತ್ರಿ ಆದಿಯಾಗಿ ಅಧಿಕಾರಿ ವರ್ಗಕ್ಕೂ ಮನವಿಯನ್ನು ನೀಡಿದ್ದರು. ಅದರ ಫಲವಾಗಿ ಈಗ ಮತ್ತೆ ಸರಕಾರಿ ಬಸ್ ಗಳನ್ನು ಓಡಿಸಲು ಮಂಗಳೂರು ಕೆಎಸ್ಸಾರ್ಟಿಸಿ ಡಿಪೋ ಒಪ್ಪಿಕೊಂಡಿದೆ.
13 new government buses added to Mangalore city under Shakthi Yogana.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm