ಬ್ರೇಕಿಂಗ್ ನ್ಯೂಸ್
06-09-23 11:06 pm Mangalore Correspondent ಕರಾವಳಿ
ಮಂಗಳೂರು, ಸೆ.6: ಹಿಂದುಗಳ ಹಲವು ಸಾಂಪ್ರದಾಯಿಕ ಮತ್ತು ಮಹತ್ವದ ಹಬ್ಬಗಳನ್ನು ಆಚರಿಸುವ ಸಂದರ್ಭ ಕಟ್ಟುನಿಟ್ಟಿನ ನಿಯಮಗಳನ್ನು ಹೇರಿ ಹಬ್ಬದ ಆಚರಣೆಯನ್ನು ತಡೆಯುಟ್ಟುವ ಕ್ರಮ ಸರಿಯಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಇತ್ತೀಚೆಗೆ ಮಂಗಳೂರು ಪೊಲೀಸ್ ಕಮಿಷನರ್ ಅವರ ಆದೇಶದಂತೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಹಲವು ಕಠಿಣ ನಿಯಮಗಳನ್ನು ಹೇರಿ ಆದೇಶ ಹೊರಡಿಸಿದ್ದರು. ಇದು ಸಾಂಪ್ರದಾಯಿಕ ಹಬ್ಬದ ಆಚರಣೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಕಾನೂನುಗಳನ್ನು ನೆಪವಾಗಿಟ್ಟುಕೊಂಡು ಹಬ್ಬದ ಆಚರಣೆಯ ಮೇಲೆ ನಿಯಂತ್ರಣ ಹೇರುವುದು ಸರಿಯಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಬ್ಬ ಆಚರಿಸುವ ಸಮಿತಿಯ ಪ್ರಮುಖರ ಫೋಟೋಗಳನ್ನು, ಆಚರಿಸುವ ಜಾಗದ ದಾಖಲೆಗಳನ್ನು ಠಾಣೆಗೆ ತಂದುಪ್ಪಿಸಬೇಕು ಎಂಬ ನಿರ್ದೇಶನ ಸಮಂಜಸವಾದುದಲ್ಲ. ಸಮಿತಿಯಲ್ಲಿರುವ ಸದಸ್ಯರೆಲ್ಲರೂ ಗೌರವಾನ್ವಿತ ವ್ಯಕ್ತಿಗಳಾಗಿದ್ದಾರೆ. ಅವರ ಫೋಟೋಗಳನ್ನು ಠಾಣೆಗೆ ತರಿಸುವ ವ್ಯವಸ್ಥೆ ಎಷ್ಟು ಸರಿ ? ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನು ಹಬ್ಬದ ಆಚರಣೆಯ ಸಂದರ್ಭ ಮೆರವಣಿಗೆಗಳನ್ನು ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು ಎಂಬ ನಿಯಮ ಹೇಳಿರುವುದು ಮೆರವಣಿಗೆಯನ್ನು ಹತ್ತಿಕ್ಕುವ ಯತ್ನದ ಒಂದು ಭಾಗವಾಗಿದೆ. ಮಂಗಳೂರು ವಿವಿಯಲ್ಲಿ ಕೂಡ ಗಣೇಶ ಹಬ್ಬ ಆಚರಣೆ ಮಾಡಬಾರದು ಎಂಬ ಸೂಚನೆಯೂ ಕಾಂಗ್ರೆಸ್ ಸರಕಾರದ ಹಿಡನ್ ಅಜೆಂಡಾವೇ ಆಗಿದೆ ಎಂದು ಅವರು ದೂರಿದ್ದಾರೆ.
ಸಾಂಪ್ರದಾಯಿಕವಾಗಿ ಈ ಹಿಂದಿನಂತೆ ನಡೆದು ಬಂದ ಹಬ್ಬವು ಯಥಾಸ್ಥಿತಿ ಆಚರಣೆಗೆ ಆಡಳಿತ ಅವಕಾಶ ಮಾಡಿಕೊಡಬೇಕು. ಬಿಜೆಪಿ ಸರ್ಕಾರ ಆಡಳಿತವಿದ್ದ ಸಂದರ್ಭ ಹಬ್ಬದ ಆಚರಣೆಗಳಿಗೆ ಯಾವುದೇ ಕಟ್ಟುನಿಟ್ಟಿನ ನಿಬಂಧನೆಗಳನ್ನು ವಿಧಿಸಲಾಗಿರಲಿಲ್ಲ. ಇದೀಗ ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ಹಿಂದೂಗಳ ಸಾಂಪ್ರದಾಯಕ ಹಬ್ಬದ ಆಚರಣೆಗಳ ಮೇಲೆ ನಿಯಂತ್ರಣ ಹೇರಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸವನ್ನು ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಹಬ್ಬದ ಆಚರಣೆಗೆ ಅಡ್ಡಿಪಡಿಸುವುದನ್ನು ನಾವು ಸಹಿಸುವುದಿಲ್ಲ ಎಂದು ಶಾಸಕ ಕಾಮತ್ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.
Mangaluru South MLA D Vedavyas Kamath has said that it is not right to impose strict rules while celebrating many traditional and important festivals of Hindus.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm