ಬ್ರೇಕಿಂಗ್ ನ್ಯೂಸ್
07-09-23 06:14 pm Mangalore Correspondent ಕರಾವಳಿ
ಪುತ್ತೂರು, ಸೆ.7: ಶಾಸಕ ಅಶೋಕ್ ರೈ ಅವರ ಬೆಂಬಲಿಗ ಗುರುಪ್ರಸಾದ್ ರೈ ಮನೆಗೆ ನುಗ್ಗಿದ ಆಗಂತುಕರು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆಗೈದ ಘಟನೆ ಬಡಗನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ.
ಗುರುವಾರ ನಸುಕಿನ ಜಾವದ ಎರಡು ಗಂಟೆ ವೇಳೆಗೆ ಘಟನೆ ನಡೆದಿದೆ. ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುದ್ಕಾಡಿ ನಿವಾಸಿ ಗುರುಪ್ರಸಾದ್ ರೈ ಅವರ ಮನೆಯ ಬಾಗಿಲು ಒಡೆದು ಒಳನುಗ್ಗಿದ 8 ಮಂದಿಯಿದ್ದ ತಂಡ ಗುರುಪ್ರಸಾದ್ ಅವರನ್ನು ಕಟ್ಟಿಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ಚಿನ್ನವನ್ನು ದರೋಡೆ ಮಾಡಿದೆ. ಸುಮಾರು ಒಂದೂವರೆ ಗಂಟೆ ಕಾಲ ಮನೆಯೊಳಗೇ ಇದ್ದು, ಎಲ್ಲ ಕಡೆಗಳಲ್ಲೂ ಹುಡುಕಾಡಿದೆ.


ಆಗಂತುಕರು ತುಳು ಮತ್ತು ಕನ್ನಡ ಭಾಷೆಯನ್ನು ಮಾತನಾಡುತ್ತಿದ್ದರು. ಒಳಗೆಲ್ಲ ಜಾಲಾಡಿದ ಬಳಿಕ ಹಿಂದಿನ ಬಾಗಿಲಿನಿಂದ ಹೊರಗೆ ಹೋಗಿ ತಪ್ಪಿಸಿಕೊಂಡಿದ್ದಾರೆ. ಹೊರಗೆ ಹೋಗುವಾಗ ಗುರುಪ್ರಸಾದ್ ಅವರ ಕಟ್ಟಿದ ಕೈಗಳನ್ನು ಬಿಚ್ಚಿ ದರೋಡೆಕೋರರು ಪರಾರಿಯಾಗಿದ್ದಾರೆ. ಇದೇ ವೇಳೆ, ತಮ್ಮ ಬಗ್ಗೆ ಬೇಗನೆ ಪೊಲೀಸರಿಗೆ ಮಾಹಿತಿ ನೀಡದಿರಲಿ ಎಂದು ಗುರುಪ್ರಸಾದ್ ಅವರ ಮೊಬೈಲನ್ನು ನೀರಿಗೆ ಹಾಕಿ ಹಾನಿ ಮಾಡಿದ್ದಾರೆ.
Puttur MLA Ashok Rai close aides house robbed.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm