ಬ್ರೇಕಿಂಗ್ ನ್ಯೂಸ್
09-11-20 01:31 pm Mangaluru Correspondent ಕರಾವಳಿ
ಬಂಟ್ವಾಳ, ನವೆಂಬರ್ 09 : ಕೊರೋನಾ ಹೆಸರಲ್ಲಿ ಹಣ ಬಂದಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬ ಮಹಿಳೆಯಿಂದ ಚಿನ್ನ ಎಗರಿಸಿ ಪರಾರಿಯಾಗಿರುವ ಘಟನೆ ಬಿ.ಸಿ.ರೋಡ್ ನಲ್ಲಿ ನಡೆದಿದೆ.
ಅಮ್ಟಾಡಿ ನಿವಾಸಿ, ಜಯಂತಿ ಮೋಸ ಹೋದ ಮಹಿಳೆ. ಬಿ.ಸಿ.ರೋಡಿನ ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿ ವಾಪಸ್ ಹೋಗುತ್ತಿದ್ದ ಜಯಂತಿ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬ ತನ್ನ ಪರಿಚಯ ಮಾಡಿಕೊಂಡಿದ್ದಾನೆ. ತಾನು, ಶೀನಪ್ಪ ಅವರ ಮಗ ಸಂತೋಷ್ ಎಂದು ಹೇಳಿ ನಂಬಿಸಿದ್ದಾನೆ. ನಿಮಗೆ ಕೊರೋನಾ ಹೆಸರಲ್ಲಿ ಒಂದೂವರೆ ಲಕ್ಷ ರೂಪಾಯಿ ಹಣ ಬಂದಿದೆ. ಅದನ್ನು ಪಡೆಯಲು ಹತ್ತು ಸಾವಿರ ರೂಪಾಯಿ ಪಾವತಿಸಬೇಕು ಎಂದು ಹೇಳಿದ್ದಲ್ಲದೆ ಅರ್ಜಿ ತುಂಬಿಸಲೆಂದು ಮಹಿಳೆಯನ್ನು ಮಿನಿ ವಿಧಾನಸೌಧಕ್ಕೆ ಕರೆದೊಯ್ದಿದ್ದಾನೆ. ಹಣ ಕೇಳಿದ್ದಕ್ಕೆ ಮಹಿಳೆ ಈಗ ನನ್ನಲ್ಲಿ ಹಣ ಇಲ್ಲ ಎಂದಿದ್ದಾರೆ. ಮಗನಿಗೆ ಕರೆ ಮಾಡಿ ಹಣ ಇದೆಯಾ ಎಂದು ಕೇಳುತ್ತೇನೆ ಎಂದಿದ್ದು, ಅದಕ್ಕೆ ಯುವಕ, ಮಗನಿಗೆ ನಾನು ಆಗಲೇ ಕರೆ ಮಾಡಿ ಕೇಳಿದ್ದೇನೆ. ಆತ ಇಲ್ಲ ಎಂದಿದ್ದಾನೆ. ತಾಯಿಯಲ್ಲಿ ಹಣ ಇಲ್ಲದಿದ್ದರೆ ಅವರ ಚಿನ್ನ ಪಡೆದು ಹಣ ತೆಗೆಯುವಂತೆ ಹೇಳಿದ್ದಾನೆಂದು ಅಪರಿಚಿತ ವ್ಯಕ್ತಿ ಮಹಿಳೆಯನ್ನು ನಂಬಿಸಿದ್ದಾನೆ.
ಅಪರಿಚಿತನ ಮಾತನ್ನು ನಂಬಿದ ಮಹಿಳೆ ಕಿವಿಯಲ್ಲಿದ್ದ ಬೆಂಡೋಲೆ ತೆಗೆದು ಕೊಟ್ಟಿದ್ದಾರೆ. ಚಿನ್ನ ಪಡೆದ ವ್ಯಕ್ತಿ ನೀವು ಇಲ್ಲೇ ಕುಳಿತುಕೊಳ್ಳಿ ಎಂದು ಹೇಳಿ ಹೋದವನು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಕೊನೆಗೆ ಮಹಿಳೆ ಮಿನಿ ವಿಧಾನಸೌಧದ ಕಚೇರಿಯ ಮಹಿಳಾ ಸಿಬ್ಬಂದಿ ಮೂಲಕ ಮಗನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಸ್ಥಳಕ್ಕೆ ಬಂದ ಅವರ ಮಗ ತಾಯಿಯನ್ನು ಬಂಟ್ವಾಳ ನಗರ ಠಾಣೆಗೆ ಕರೆದುಕೊಂಡು ಹೋಗಿ ದೂರು ನೀಡಿದ್ದಾರೆ. ಮಿನಿ ವಿಧಾನ ಸೌಧದಲ್ಲಿರುವ ಸಿ.ಸಿ. ಕ್ಯಾಮರ ದೃಷ್ಯ ಆಧರಿಸಿ, ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
In an incident that occurred on the morning of Monday, November 9, a financially poor woman lost her gold as she was fooled by fraudsters saying that she has got ‘Corona’ money in her name but need to pay fee in order to get the same and made good with her gold.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am