ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.

ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm