ಬ್ರೇಕಿಂಗ್ ನ್ಯೂಸ್
08-09-23 03:36 pm Mangalore Correspondent ಕರಾವಳಿ
ಮಂಗಳೂರು, ಸೆ.8: ಮಂಗಳೂರು ಮಹಾನಗರ ಪಾಲಿಕೆಯ 24ನೇ ಮೇಯರ್ ಆಗಿ ಕೊಡಿಯಾಲ್ ಬೈಲ್ ವಾರ್ಡಿನ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು ಆಯ್ಕೆಯಾಗಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ ಸುನಿತಾ ಆಯ್ಕೆಯಾಗಿದ್ದಾರೆ.
ಮಹಾನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್ ಆಯ್ಕೆ ಇಂದು ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಪಾಲಿಕೆಯಲ್ಲಿ 44 ಸದಸ್ಯರೊಂದಿಗೆ ಬಹುಮತ ಹೊಂದಿರುವ ಬಿಜೆಪಿ ನಿರಾಯಾಸವಾಗಿ ಚುನಾವಣೆ ಗೆದ್ದಿದೆ. ಕಾಂಗ್ರೆಸಿನಿಂದ ನವೀನ್ ಡಿಸೋಜ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದು, ಅವರಿಗೆ ಪಕ್ಷದಲ್ಲಿ ಆಯ್ಕೆಯಾಗಿದ್ದ 14 ಸದಸ್ಯರು ಮತ ನೀಡಿದ್ದಾರೆ. ಬಿಜೆಪಿ ಪರವಾಗಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ ಮತ್ತು ವೇದವ್ಯಾಸ ಕಾಮತ್ ಇದ್ದರು. ಅವರೂ ಮತ ಚಲಾವಣೆ ಮಾಡಿದ್ದರಿಂದ ಸುಧೀರ್ ಶೆಟ್ಟಿ ಪರವಾಗಿ 47 ಮತಗಳು ಲಭಿಸಿದ್ದವು.

ಉಪ ಮೇಯರ್ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿತ್ತು. ಬಿಜೆಪಿಯಿಂದ ತಣ್ಣೀರುಬಾವಿ ವಾರ್ಡ್ ಸದಸ್ಯೆ ಸುನಿತಾ ನಾಮಪತ್ರ ಸಲ್ಲಿಸಿದ್ದು, ಕಾಂಗ್ರೆಸಿನಿಂದ ಆ ಸ್ಥಾನಕ್ಕೆ ಸ್ಪರ್ಧಿಸಲು ಸದಸ್ಯರಿಲ್ಲದ ಕಾರಣ ಅವಿರೋಧ ಆಯ್ಕೆಯಾದರು. ಎಸ್ಡಿಪಿಐ ಪಕ್ಷದ ಇಬ್ಬರು ಸದಸ್ಯರು ಚುನಾವಣೆ ಸಂದರ್ಭದಲ್ಲಿ ತಟಸ್ಥರಾಗುಳಿದರು.
ಮೂರನೇ ಬಾರಿ ಕಾರ್ಪೊರೇಟರ್ ಆಗಿರುವ ಸುಧೀರ್ ಶೆಟ್ಟಿ ಈ ಬಾರಿ ಮೊದಲ ಅವಧಿಯಲ್ಲೇ ಮೇಯರ್ ಸ್ಥಾನದ ಆಕಾಂಕ್ಷಿಯಾಗಿದ್ದರು. ಪ್ರೇಮಾನಂದ ಶೆಟ್ಟಿ ಹಿರಿಯ ಸದಸ್ಯನಾಗಿದ್ದರಿಂದ ಆಗ ಮೇಯರ್ ಸ್ಥಾನಕ್ಕೆ ಆಯ್ಕೆಯಾಗಿದ್ದರು. ಈ ಬಾರಿ ಸಾಮಾನ್ಯ ವರ್ಗಕ್ಕೆ ಮೇಯರ್ ಸ್ಥಾನ ಲಭಿಸಿದ್ದರಿಂದ ಸುಧೀರ್ ಶೆಟ್ಟಿಗೆ ಸ್ಥಾನ ಒಲಿದು ಬಂದಿದೆ.
Sudhir Shetty Kannur was elected as mayor of Mangaluru City Corporation (MCC) and Suneetha Salian as the deputy mayor in 24th MCC elections held at MCC office on Friday September 8.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm