ಬ್ರೇಕಿಂಗ್ ನ್ಯೂಸ್
09-11-20 02:14 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 09 :ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ಖಾಸಗೀಕರಣಗೊಳಿಸಿ ಅದಾನಿ ಕಂಪೆನಿಗೆ ಗುತ್ತಿಗೆ ವಹಿಸಿರುವ ಕೇಂದ್ರ ಸರಕಾರದ ಕ್ರಮವನ್ನ ಖಂಡಿಸಿ ಬಜ್ಪೆ ಬಳಿಯ ಕೆಂಜಾರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿಮಾನ ನಿಲ್ದಾಣ ಪ್ರವೇಶ ದ್ವಾರವಿರುವ ನಗರದ ಕೆಂಜಾರು ಬಳಿ ಸೇರಿದ ಸುಮಾರು 50 ಕ್ಕೂ ಅಧಿಕ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಮಂಗಳೂರಿಗೆ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗಾಗಿ ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್ ಕೇಂದ್ರಕ್ಕೆ ಒತ್ತಡ ಹೇರಿದ್ದರು. ಅದರ ಫಲವಾಗಿ ಇಂದಿನ ವಿಸ್ತೃತ ವಿಮಾನ ನಿಲ್ದಾಣ ರೆಡಿಯಾಗಿತ್ತು. ಆದರೆ, ಬಿಜೆಪಿ ಅಧಿಕಾರಕ್ಕೆ ಬಂದು ವಿಮಾನ ನಿಲ್ದಾಣವನ್ನೇ ಅದಾನಿಗೆ ಕೊಟ್ಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಈ ಜಿಲ್ಲೆಗೆ ಕೊಟ್ಟ ಕೊಡುಗೆ ಏನು ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.



ಮಾಜಿ ಶಾಸಕ ಜೆ.ಆರ್ ಲೋಬೊ ಮಾತನಾಡಿ, ಎನ್ ಎಂಪಿಟಿ ಅನುಷ್ಠಾನಕ್ಕೆ ತಂದಿದ್ದು ಯು.ಎಸ್.ಮಲ್ಯರು. ಅದರ ಅಭಿವೃದ್ಧಿಗಾಗಿ ಶ್ರಮಿಸಿದ್ದು ವೀರಪ್ಪ ಮೊಯ್ಲಿ. ಈಗ ವಿಮಾನ ನಿಲ್ದಾಣ ಖಾಸಗಿಯವರಿಗೆ ಕೊಟ್ಟಿದ್ದಾರೆ. ಇನ್ನು ಎನ್ಎಂಪಿಟಿ ಬಂದರನ್ನೂ ಖಾಸಗಿಗೆ ಕೊಡಲ್ಲ ಎನ್ನುವ ಗ್ಯಾರಂಟಿಯಿಲ್ಲ.. ಈ ಜಿಲ್ಲೆಯ ಬ್ಯಾಂಕ್ ಗಳನ್ನೆಲ್ಲ ಇನ್ನಿಲ್ಲವಾಗಿಸಿದ್ದಾರೆ. ಹಾಗಾದರೆ ಬಿಜೆಪಿಯಿಂದ ಈ ಜಿಲ್ಲೆಗೆ ಸಿಕ್ಕಿದ ಕೊಡುಗೆ ಏನು? ಬಿಜೆಪಿಯವರೇ ಇಲ್ಲಿನದ್ದೆಲ್ಲ ಖಾಸಗಿಗೆ ಕೊಟ್ಟು ಮುಗಿಸಿದ್ದು ಬಿಟ್ಟರೆ ಸಾಧಿಸಿದ್ದು ಏನು ಎಂದು ಕೇಳಿದ್ದಾರೆ.
ಅಲ್ಲದೆ, ವಿಮಾನ ನಿಲ್ದಾಣಕ್ಕೆ ತುಳುನಾಡಿನ ಆರಾಧನಾ ಪುರುಷರಾದ ಕೋಟಿ ಚೆನ್ನಯ್ಯ ಇಲ್ಲವೇ ಮಂಗಳೂರು ಅಭಿವೃದ್ಧಿಯ ರೂವಾರಿ ಶ್ರೀನಿವಾಸ್ ಮಲ್ಯ ಅವರ ಹೆಸರಿಡುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ ಜೈನ್, ಐವನ್ ಡಿಸೋಜಾ, ಮಿಥುನ್ ರೈ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತು ಒದಗಿಸಲಾಗಿತ್ತು.
Video:
Congress Leaders and Members protests at khanjar, near Mangalore Airport, against privatisation issue and takes over of Mangalore International Airport by Adani Group for commercial operations.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am