ಬ್ರೇಕಿಂಗ್ ನ್ಯೂಸ್
09-09-23 03:16 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಿನಿ ಲಾರಿ, ಕಾರು ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು ಲಾರಿ - ಬಸ್ಸಿನ ನಡುವೆ ಅಪ್ಪಚ್ಚಿಯಾಗಿದ್ದ ಕಾರಿನ ಚಾಲಕನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹೊರಗೆಳೆದು ರಕ್ಷಿಸಿದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಲಾರಿಯೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಲಾರಿಯ ಹಿಂದೆ ಚಲಿಸುತ್ತಿದ್ದ ಕಾರನ್ನು ಚಾಲಕನು ಹಠಾತ್ತನೇ ಬ್ರೇಕ್ ಹೊಡೆದು ನಿಲ್ಲಿಸಿದ್ದು ಈ ಕಾರಿಗೆ ಹಿಂದಿನಿಂದ ವೇಗವಾಗಿ ಧಾವಿಸುತ್ತಿದ್ದ ಕೇರಳ ಸರಕಾರಿ ಸಾರಿಗೆಯ ಮಲಬಾರ್ ಬಸ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಎದುರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಕಾರಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ, ಚಾಲಕನಾಗಿದ್ದ ದಿನೇಶ್ ಎಂಬವರು ಸಿಲುಕಿದ್ದು ಆತನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹರಸಾಸಹ ಪಟ್ಟು ಹೊರಗೆಳೆದು ಆಸ್ಪತ್ರೆ ಸೇರಿಸಿದ್ದಾರೆ.

ಕಾರಿನಲ್ಲಿ ಚಾಲಕನೊಬ್ಬನೇ ಇದ್ದು ಹಿಂದಿನ ಸೀಟಲ್ಲಿ ಪ್ರಯಾಣಿಕರಿದ್ದರೆ ಮಾರಣ ಹೋಮವೇ ನಡೆಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಘಟನೆಯ ವೀಡಿಯೋ ದಾಖಲಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Jeppinamogaru accident, car stucks between lorry and bus.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm