ಬ್ರೇಕಿಂಗ್ ನ್ಯೂಸ್
09-09-23 03:16 pm Mangalore Correspondent ಕರಾವಳಿ
ಮಂಗಳೂರು, ಸೆ.9: ಮಿನಿ ಲಾರಿ, ಕಾರು ಮತ್ತು ಬಸ್ಸಿನ ನಡುವೆ ಸರಣಿ ಅಪಘಾತ ನಡೆದಿದ್ದು ಲಾರಿ - ಬಸ್ಸಿನ ನಡುವೆ ಅಪ್ಪಚ್ಚಿಯಾಗಿದ್ದ ಕಾರಿನ ಚಾಲಕನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹೊರಗೆಳೆದು ರಕ್ಷಿಸಿದ ಘಟನೆ ರಾ.ಹೆ.66 ರ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಜಪ್ಪಿನಮೊಗರು ಹೆದ್ದಾರಿಯಲ್ಲಿ ಶನಿವಾರ ಮಧ್ಯಾಹ್ನ ಘಟನೆ ನಡೆದಿದ್ದು ತಲಪಾಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಮಿನಿ ಲಾರಿಯೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಲಾರಿಯ ಹಿಂದೆ ಚಲಿಸುತ್ತಿದ್ದ ಕಾರನ್ನು ಚಾಲಕನು ಹಠಾತ್ತನೇ ಬ್ರೇಕ್ ಹೊಡೆದು ನಿಲ್ಲಿಸಿದ್ದು ಈ ಕಾರಿಗೆ ಹಿಂದಿನಿಂದ ವೇಗವಾಗಿ ಧಾವಿಸುತ್ತಿದ್ದ ಕೇರಳ ಸರಕಾರಿ ಸಾರಿಗೆಯ ಮಲಬಾರ್ ಬಸ್ ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಕಾರು ಎದುರಲ್ಲಿ ನಿಂತಿದ್ದ ಲಾರಿಗೆ ಅಪ್ಪಳಿಸಿ ಅಪ್ಪಚ್ಚಿಯಾಗಿದೆ. ಅಪ್ಪಚ್ಚಿಯಾದ ಕಾರಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ, ಚಾಲಕನಾಗಿದ್ದ ದಿನೇಶ್ ಎಂಬವರು ಸಿಲುಕಿದ್ದು ಆತನನ್ನ ಸ್ಥಳೀಯರು ಮತ್ತು ವಾಹನ ಸವಾರರು ಹರಸಾಸಹ ಪಟ್ಟು ಹೊರಗೆಳೆದು ಆಸ್ಪತ್ರೆ ಸೇರಿಸಿದ್ದಾರೆ.

ಕಾರಿನಲ್ಲಿ ಚಾಲಕನೊಬ್ಬನೇ ಇದ್ದು ಹಿಂದಿನ ಸೀಟಲ್ಲಿ ಪ್ರಯಾಣಿಕರಿದ್ದರೆ ಮಾರಣ ಹೋಮವೇ ನಡೆಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಘಟನೆಯ ವೀಡಿಯೋ ದಾಖಲಾಗಿದೆ. ಕಾರು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Jeppinamogaru accident, car stucks between lorry and bus.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
ಮೂಡುಬಿದ್ರೆ ಎಕ್ಸ್ಪ್ರೆಸ್ ಬಸ್ - ಕಂಟೇನರ್ ಲಾರಿ ಮ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm