ಬ್ರೇಕಿಂಗ್ ನ್ಯೂಸ್
11-09-23 06:10 pm Mangalore Correspondent ಕರಾವಳಿ
ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ.
ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.
ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.
Ullal Man commits Suicide at wife's house at Bantwal in Mangalore. The deceased has been identifed as Ravindra (35).
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm