ಬ್ರೇಕಿಂಗ್ ನ್ಯೂಸ್
11-09-23 06:10 pm Mangalore Correspondent ಕರಾವಳಿ
ಉಳ್ಳಾಲ, ಸೆ.11: ಉಳ್ಳಾಲ ತಾಲೂಕಿನ ಕೊಂಡಾಣ ಮಿತ್ರನಗರದ ನಿವಾಸಿಯೋರ್ವರು ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಹೊರೆಯಲ್ಲಿದ್ದ ವ್ಯಕ್ತಿಯ ಸಾವಿಗೆ ಬೆಟ್ಟಿಂಗ್ ಜಾಲವೇ ಕಾರಣವೆಂದು ತಿಳಿದುಬಂದಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೊಂಡಾಣ, ಮಿತ್ರನಗರ ನಿವಾಸಿ ರವೀಂದ್ರ(35) ಆತ್ಮಹತ್ಯೆಗೈದ ವ್ಯಕ್ತಿ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮಧ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನ ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಒಬ್ಬಂಟಿಯಾಗಿ ಪತ್ನಿಯ ಮನೆ ಸೇರಿದ್ದರಂತೆ. ಸಾಯಂಕಾಲ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ವಿಚಲಿತರಾದ ಪತ್ನಿ ನೆರೆಹೊರೆಯವರಲ್ಲಿ ಕರೆ ಮಾಡಿ ತಿಳಿಸಿದ್ದಾರೆ.
ನೆರೆಮನೆಯ ನಿವಾಸಿಗಳು ಮನೆ ಕಡೆ ತೆರಳಿದಾಗ ರವೀಂದ್ರ ಅವರು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ವಿಚಾರ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಕೊಂಡಾಣ, ಮಿತ್ರನಗರದಲ್ಲಿ ಮೃತ ರವೀಂದ್ರ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆದಿದೆ.
ರವೀಂದ್ರ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ಸಕ್ರಿಯರಾಗಿದ್ದು ಸಾಲದ ಹೊರೆ ಹೊತ್ತಿದ್ದರು ಎಂದು ಅವರನ್ನ ಬಲ್ಲ ಆಪ್ತರು ತಿಳಿಸಿದ್ದಾರೆ. ಬೆಟ್ಟಿಂಗ್ ಜಾಲದ ಬುಕ್ಕಿಗಳ ಕಿರುಕುಳದಿಂದಲೇ ಅವರು ಪತ್ನಿ ಮತ್ತು ನಾಲ್ಕು ವರ್ಷದ ಕಂದಮ್ಮನನ್ನ ಅನಾಥರಾಗಿಸಿ ಸಾವಿಗೆ ಶರಣಾಗಿರುವುದಾಗಿ ಸ್ನೇಹಿತರು ಹೇಳುತ್ತಿದ್ದಾರೆ.
Ullal Man commits Suicide at wife's house at Bantwal in Mangalore. The deceased has been identifed as Ravindra (35).
21-08-25 06:02 pm
Bangalore Correspondent
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
21-08-25 12:54 pm
HK News Desk
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm