ಬ್ರೇಕಿಂಗ್ ನ್ಯೂಸ್
11-09-23 09:11 pm Mangalore Correspondent ಕರಾವಳಿ
ಮಂಗಳೂರು, ಸೆ.11: ಹೆಣ್ಮಕ್ಕಳಿಗೆ ಮುಟ್ಟು ಎನ್ನುವುದು ಹಿಂದಿನ ಕಾಲದಲ್ಲಿ ಅಪವಿತ್ರ ಎನ್ನುವ ಕಲ್ಪನೆ ಇತ್ತು. ಅವರನ್ನು ಪ್ರತ್ಯೇಕ ಇರಿಸುವ, ಪವಿತ್ರ ಕಾರ್ಯಗಳಿಂದ ದೂರವಿಡುತ್ತಿದ್ದ ಪದ್ಧತಿ ಇತ್ತು. ಸಮಾಜದಲ್ಲಿ ಯಾಕೆ ಆ ರೀತಿಯ ಕಲ್ಪನೆ ಇತ್ತೆಂದು ಗೊತ್ತಿಲ್ಲ. ಆದರೆ ಈಗ ಅಂತಹ ಸ್ಥಿತಿ ಇಲ್ಲ. ಮುಟ್ಟಿನ ಸಂದರ್ಭದಲ್ಲಿಯೂ ಹೆಣ್ಮಕ್ಕಳು ಎಲ್ಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮುಟ್ಟು ಅಪವಿತ್ರ ಎನ್ನುವ ಭಾವನೆ ಹೋಗಲಾಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮೈತ್ರಿ ಮುಟ್ಟಿನ ಕಪ್ ಗಳನ್ನು ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ವಿತರಣೆ ಮಾಡಲಾಯಿತು.




ಮೈತ್ರಿ ಮುಟ್ಟಿನ ಕಪ್ ಯೋಜನೆಗೆ ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ರಾಯಭಾರಿ ಆಗಿದ್ದಾರೆ. ಕಾರ್ಯಕ್ರಮದಲ್ಲಿ ಸಪ್ತಮಿ ಗೌಡ ಮುಖ್ಯ ಆಕರ್ಷಣೆಯಾಗಿದ್ದು ಮುಟ್ಟಿನ ಕಪ್ ಬಗ್ಗೆ ಅನಿಸಿಕೆ ಹೇಳಿಕೊಂಡರು. ಪೀರಿಯಡ್ಸ್ ಸಮಯದಲ್ಲಿ ಪ್ಯಾಡ್ ಬಳಸಿದಲ್ಲಿ ಅದನ್ನು ವಿಲೇವಾರಿ ಮಾಡುವುದೇ ಸವಾಲು. ಆದರೆ ಮೈತ್ರಿ ಮುಟ್ಟಿನ ಕಪ್ ಉಪಯೋಗಿಸಿದಲ್ಲಿ ಮರು ಬಳಕೆ ಮಾಡಬಹುದು. ಜೊತೆಗೆ, ಪರಿಸರ ಸ್ನೇಹಿಯಾಗಿದೆ. ಇದರಿಂದ ಪರಿಸರಕ್ಕೆ ಹಾನಿಯಿಲ್ಲ. ಇದನ್ನು ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಮಕ್ಕಳು ಬಳಸಿಕೊಳ್ಳಬೇಕು. ನಾನು ಬೇಸಿಕಲೀ ಈಜು ಪಟು. ನೇಶನಲ್ ಚಾಂಪಿಯನ್ ಆಗಿದ್ದೆ. ನನಗೆ ಯಾವತ್ತೂ ಮುಟ್ಟಿನ ವಿಷಯ ಕ್ರೀಡೆಗೆ ತೊಂದರೆ ಆಗಿಲ್ಲ ಎಂದರು.



ಕಾರ್ಯಕ್ರಮದಲ್ಲಿ ಸ್ಪೀಕರ್ ಯುಟಿ ಖಾದರ್, ಶಾಸಕರಾದ ಅಶೋಕ್ ಕುಮಾರ್ ರೈ, ಮಂಜುನಾಥ ಭಂಡಾರಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ. ರಂದೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ. ಎಂ. ಇಂದುಮತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕರಾದ ಡಾ. ಶ್ರೀನಿವಾಸ್ ಜಿ.ಎನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕರಾದ ಡಾ.ರಾಜೇಶ್ವರಿ ದೇವಿ ಎಚ್.ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕರಾದ ಡಾ. ವೀಣಾ ವಿ. ಭಾಗವಾಹಿಸಿದ್ದರು.
Minister for Health and Family Welfare Dinesh Gundu Rao said that the government will resume distribution of free sanitary pads to about 40 lakh girl students aged between 10 and 18 years, enrolled in schools and colleges across Karnataka, from October.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm