ಬ್ರೇಕಿಂಗ್ ನ್ಯೂಸ್
12-09-23 05:03 pm Mangalore Correspondent ಕರಾವಳಿ
ಮಂಗಳೂರು, ಸೆ.12: 2023 ಜುಲೈ ತಿಂಗಳಲ್ಲಿ ನಡೆದ ಸಂಸತ್ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವಾಲಯ ಮಂಡಿಸಿದ ವರದಿಯ ಪ್ರಕಾರ 2019-2021ರ ಮೂರು ವರ್ಷಗಳಲ್ಲಿ ದೇಶಾದ್ಯಂತ 13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ. ಈ ಪೈಕಿ 31,935 ಮಹಿಳೆಯರು ಹಾಗೂ ಬಾಲಕಿಯರು ಕರ್ನಾಟಕದಿಂದ ನಾಪತ್ತೆಯಾಗಿದ್ದಾರೆಂದು ವರದಿ ತಿಳಿಸಿದೆ. ಆದರೆ ಮಹಿಳಾ ಪರ ಸರ್ಕಾರ ಎಂಬಂತೆ ಬಿಂಬಿಸಿಕೊಳ್ಳುತ್ತಿರುವ ಕರ್ನಾಟಕ ಸರ್ಕಾರವು ಈ ಬಗ್ಗೆ ಎಚ್ಚೆತ್ತುಕೊಂಡಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ವಿಶೇಷ ತನಿಖಾ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೇಂಟ್ ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ.
ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ಒತ್ತಾಯ ಮಾಡಲಾಯಿತು. ರಾಜ್ಯದ ಬಹಳಷ್ಟು ಸಮಸ್ಯೆಗಳತ್ತ ರಾಜ್ಯ ಸರಕಾರ ಗಮನ ಕೊಡಬೇಕೆಂದೂ ಅದರಲ್ಲೂ ವಿಶೇಷವಾಗಿ
ಅಲ್ಪಸಂಖ್ಯಾತ ದಲಿತ, ಹಿಂದುಳಿದ ವರ್ಗಗಳ ಮತ ಪಡೆದು ಅಧಿಕಾರಕ್ಕೆ ಬಂದಿರುವ ಸರ್ಕಾರ ಈ ವರ್ಗಗಳ ಪರ ಅಭಿವೃದ್ಧಿ ವಿಷಯದಲ್ಲಿ ಹಾಗೂ ಅವರ ಮೇಲಾಗುತ್ತಿರುವ ದೌರ್ಜನ್ಯ, ಅನ್ಯಾಯದ ಬಗ್ಗೆ ನಿರ್ಲಕ್ಷ ವಹಿಸಿರುವುದು ಖಂಡನಾರ್ಹ. ಹಿಜಾಬ್, 2ಬಿ ಮೀಸಲಾತಿ ಮರು ಸ್ಥಾಪಿಸುವ ಭರವಸೆ ನೀಡಿದ್ದ ಸರ್ಕಾರ ಈಗ ಜಾಣ ಮೌನ ತಾಳಿದೆ. ಬಜೆಟ್ ನಲ್ಲೂ ಅಲ್ಪಸಂಖ್ಯಾತರನ್ನು ಕಡೆಗೆಣಿಸಿರುವುದು ಗಮನಾರ್ಹ. ಇಂತಹ ನಿರ್ಲಕ್ಷತನವನ್ನು ಕೈ ಬಿಟ್ಟು ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸ ಬೇಕೆಂದು ಸಭೆಯು ಆಗ್ರಹಿಸಿದೆ.

ಸುಲಭವಾಗಿ ಕೈಗೆಟಕುತ್ತಿರುವ ಮಾದಕ ಪದಾರ್ಥಗಳು ಯುವ ಸಮೂಹವನ್ನು ವಿನಾಶದತ್ತ ಕೊಂಡೊಯ್ಯುತ್ತಿದೆ. ರಾಜ್ಯದಲ್ಲಿ ಮಾದಕ ವ್ಯಸನಿಗಳ ಬಂಧನವಾಗುತ್ತಿದೆಯೇ ಹೊರತು ಅದರ ಮೂಲವನ್ನು ಪತ್ತೆ ಹಚ್ಚುತ್ತಿಲ್ಲ. ಜೊತೆಗೆ ರಾಜಕೀಯ ಪ್ರಭಾವದಿಂದಾಗಿ ಆರೋಪಿಗಳು ಸುಲಭವಾಗಿ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಸರಕಾರ ಮಾದಕ ದ್ರವ್ಯದ ಜಾಲದ ಮೂಲವನ್ನು ಪತ್ತೆ ಹಚ್ಚಿ ನಿರ್ಮೂಲನೆಗೊಳಿಸಿ ಸ್ವಸ್ಥ ಸಮಾಜವನ್ನು ನಿರ್ಮಿಸಬೇಕೆಂದು ಸರಕಾರವನ್ನು ಒತ್ತಾಯಿಸಿದೆ.
ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯೆ ಮೇರಿ ವೇಗಸ್ ಮಹಿಳಾ ಸಂಘಟನೆ ಅನಿವಾರ್ಯತೆಯ ಬಗ್ಗೆ ಮಾತನಾಡಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ರಾಜ್ಯ ಪದಾಧಿಕಾರಿಗಳು, ರಾಜ್ಯ ಸಮಿತಿ ಸದಸ್ಯೆಯರು, ಎಲ್ಲಾ ಜಿಲ್ಲೆಗಳ ಅಧ್ಯಕ್ಷೆ-ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
13 lakhs girls missing in the last three years, Mangalore Women India Movement demands clear investigation. 13 thousnad girls from Karnataka go missing.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm