ಬ್ರೇಕಿಂಗ್ ನ್ಯೂಸ್
12-09-23 10:31 pm Mangalore Correspondent ಕರಾವಳಿ
ಮಂಗಳೂರು, ಸೆ.12: ಬಸ್ಸಿಗೆ ಹತ್ತುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ 66 ವರ್ಷದ ವೃದ್ಧ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೂಡುಬಿದ್ರೆ ಬಳಿಯ ಮಾರೂರು ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಮೊಮ್ಮಗ ಕಾಲೇಜು ತೆರಳುತ್ತಿದ್ದಾಗ, ಅಜ್ಜಿ ನೀಲಮ್ಮ (66) ಅವರೂ ಆಸ್ಪತ್ರೆಗೆ ತೆರಳುವುದಕ್ಕಾಗಿ ಜೊತೆಗೆ ಬಂದಿದ್ದರು. ಮಾರೂರು ಗ್ರಾಮದ ಕುಂಟೋಡಿ ಎಂಬಲ್ಲಿ ಮೂಡುಬಿದ್ರೆಗೆ ತೆರಳುವ ಖಾಸಗಿ ಬಸ್ಸಿಗೆ ಹತ್ತಿದ್ದಾರೆ. ಆದರೆ, ಮುಂದಿನ ಬಾಗಿಲಿನಿಂದ ನೀಲಮ್ಮ ಬಸ್ ಹತ್ತುತ್ತಿದ್ದಾಗಲೇ ಚಾಲಕನ ಬಸ್ಸನ್ನು ವೇಗವಾಗಿ ಮುಂದಕ್ಕೆ ಚಲಿಸಿದ್ದರಿಂದ ಬಾಗಿಲು ಇಲ್ಲದ ಕಾರಣ ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ತಲೆಗೆ ಗಂಭೀರ ಗಾಯಗೊಂಡಿದ್ದ ನೀಲಮ್ಮ ಅವರನ್ನು ಆಸ್ಪತ್ರೆಗೆ ಒಯ್ಯುತ್ತಿದ್ದಾಗಲೇ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಿರ್ವಾಹಕ ಅಶೋಕ್ ಮತ್ತು ಚಾಲಕ ಪ್ರಸನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದು, ಠಾಣೆಯಲ್ಲಿ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಬಸ್ ಸಿಬಂದಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಬಸ್ಸನ್ನು ಜಪ್ತಿ ಮಾಡಿದ್ದು ಆರ್ ಟಿಓ ವಶಕ್ಕೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಬಸ್ಸಿನ ಮುಂದಿನ ಬಾಗಿಲಲ್ಲಿದ್ದ ಬಸ್ಸಿನ ನಿರ್ವಾಹಕರೊಬ್ಬರು ಕೆಳಕ್ಕೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಎಲ್ಲ ಬಸ್ ಮಾಲಕರನ್ನು ಕರೆದು ಬಸ್ಸಿಗೆ ಡೋರ್ ಅಳವಡಿಸುವುದಲ್ಲದೆ, ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದ್ದರು.
Moodbidri accident, 66 year old women thrown out of bus due to over speed, dies on spot in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm