ಬ್ರೇಕಿಂಗ್ ನ್ಯೂಸ್
12-09-23 10:31 pm Mangalore Correspondent ಕರಾವಳಿ
ಮಂಗಳೂರು, ಸೆ.12: ಬಸ್ಸಿಗೆ ಹತ್ತುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟ 66 ವರ್ಷದ ವೃದ್ಧ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮೂಡುಬಿದ್ರೆ ಬಳಿಯ ಮಾರೂರು ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಮೊಮ್ಮಗ ಕಾಲೇಜು ತೆರಳುತ್ತಿದ್ದಾಗ, ಅಜ್ಜಿ ನೀಲಮ್ಮ (66) ಅವರೂ ಆಸ್ಪತ್ರೆಗೆ ತೆರಳುವುದಕ್ಕಾಗಿ ಜೊತೆಗೆ ಬಂದಿದ್ದರು. ಮಾರೂರು ಗ್ರಾಮದ ಕುಂಟೋಡಿ ಎಂಬಲ್ಲಿ ಮೂಡುಬಿದ್ರೆಗೆ ತೆರಳುವ ಖಾಸಗಿ ಬಸ್ಸಿಗೆ ಹತ್ತಿದ್ದಾರೆ. ಆದರೆ, ಮುಂದಿನ ಬಾಗಿಲಿನಿಂದ ನೀಲಮ್ಮ ಬಸ್ ಹತ್ತುತ್ತಿದ್ದಾಗಲೇ ಚಾಲಕನ ಬಸ್ಸನ್ನು ವೇಗವಾಗಿ ಮುಂದಕ್ಕೆ ಚಲಿಸಿದ್ದರಿಂದ ಬಾಗಿಲು ಇಲ್ಲದ ಕಾರಣ ಹೊರಕ್ಕೆ ಎಸೆಯಲ್ಪಟ್ಟಿದ್ದಾರೆ.
ತಲೆಗೆ ಗಂಭೀರ ಗಾಯಗೊಂಡಿದ್ದ ನೀಲಮ್ಮ ಅವರನ್ನು ಆಸ್ಪತ್ರೆಗೆ ಒಯ್ಯುತ್ತಿದ್ದಾಗಲೇ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಿರ್ವಾಹಕ ಅಶೋಕ್ ಮತ್ತು ಚಾಲಕ ಪ್ರಸನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದು, ಠಾಣೆಯಲ್ಲಿ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಬಸ್ ಸಿಬಂದಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಬಸ್ಸನ್ನು ಜಪ್ತಿ ಮಾಡಿದ್ದು ಆರ್ ಟಿಓ ವಶಕ್ಕೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಬಸ್ಸಿನ ಮುಂದಿನ ಬಾಗಿಲಲ್ಲಿದ್ದ ಬಸ್ಸಿನ ನಿರ್ವಾಹಕರೊಬ್ಬರು ಕೆಳಕ್ಕೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಎಲ್ಲ ಬಸ್ ಮಾಲಕರನ್ನು ಕರೆದು ಬಸ್ಸಿಗೆ ಡೋರ್ ಅಳವಡಿಸುವುದಲ್ಲದೆ, ಸೂಕ್ತ ಕ್ರಮ ವಹಿಸುವಂತೆ ಸೂಚನೆ ನೀಡಿದ್ದರು.
Moodbidri accident, 66 year old women thrown out of bus due to over speed, dies on spot in Mangalore.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm