ಬ್ರೇಕಿಂಗ್ ನ್ಯೂಸ್
15-09-23 05:39 pm Udupi Correspondent ಕರಾವಳಿ
ಉಡುಪಿ, ಸೆ.15: ಚೈತ್ರಾ ಬಂಧನ ಆಗಿರುವುದನ್ನು ಮಾಧ್ಯಮದಲ್ಲಿ ತಿಳಿದುಕೊಂಡಿದ್ದೇನೆ. ಆಕೆಯ ಜೊತೆಗೆ ತನಗೇನೂ ಸಂಬಂಧ ಇಲ್ಲ. ನಾವು ಯಾರೂ ಆಕೆಯ ಬೆಂಬಲಕ್ಕೆ ನಿಂತಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ತಪ್ಪು ಮಾಡದೆ ಇದ್ದರೆ ಅನಾವಶ್ಯಕ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ನಿಷ್ಪಕ್ಷವಾಗಿ ತನಿಖೆಯಾಗಲಿ. ನೈಜ ಆರೋಪಿಗಳ ಬಂಧನ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಯೇ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ಹಾಗಂತ, ಸಂಬಂಧ ಇದೆಯೆಂದು ಅರ್ಥವಲ್ಲ.
ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಚೈತ್ರಾಗೆ ಟಿಕೆಟ್ ಎಂದು ಹೇಳಿಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರೂ ಅದಕ್ಕೆ ಬೆಲೆ ಇರಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ, ಎಲ್ಲಿ ಯಾರು ಸ್ಪರ್ಧೆ ಮಾಡಬೇಕು ಅಂತ. ನಮ್ಮ ಪಕ್ಷಕ್ಕೆ ಬಲಿಷ್ಠ ನಾಯಕರಿದ್ದಾರೆ. ಮೋದಿ, ಅಮಿತ್ ಷಾ ಯಾರು ಸ್ಪರ್ಧೆ ಮಾಡಬೇಕೆಂದು ನಿರ್ಧರಿಸುತ್ತಾರೆ ಎಂದರು. ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೋ ಅದೆಲ್ಲ ತನಿಖೆ ಆಗಬೇಕು. ಇದಕ್ಕೆ ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Udupi Shobha Karandlaje slams Chaitra Kundapura over fraud of Crores.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm