ಬ್ರೇಕಿಂಗ್ ನ್ಯೂಸ್
15-09-23 05:39 pm Udupi Correspondent ಕರಾವಳಿ
ಉಡುಪಿ, ಸೆ.15: ಚೈತ್ರಾ ಬಂಧನ ಆಗಿರುವುದನ್ನು ಮಾಧ್ಯಮದಲ್ಲಿ ತಿಳಿದುಕೊಂಡಿದ್ದೇನೆ. ಆಕೆಯ ಜೊತೆಗೆ ತನಗೇನೂ ಸಂಬಂಧ ಇಲ್ಲ. ನಾವು ಯಾರೂ ಆಕೆಯ ಬೆಂಬಲಕ್ಕೆ ನಿಂತಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ತಪ್ಪು ಮಾಡದೆ ಇದ್ದರೆ ಅನಾವಶ್ಯಕ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ನಿಷ್ಪಕ್ಷವಾಗಿ ತನಿಖೆಯಾಗಲಿ. ನೈಜ ಆರೋಪಿಗಳ ಬಂಧನ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಯೇ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ಹಾಗಂತ, ಸಂಬಂಧ ಇದೆಯೆಂದು ಅರ್ಥವಲ್ಲ.
ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಚೈತ್ರಾಗೆ ಟಿಕೆಟ್ ಎಂದು ಹೇಳಿಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರೂ ಅದಕ್ಕೆ ಬೆಲೆ ಇರಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ, ಎಲ್ಲಿ ಯಾರು ಸ್ಪರ್ಧೆ ಮಾಡಬೇಕು ಅಂತ. ನಮ್ಮ ಪಕ್ಷಕ್ಕೆ ಬಲಿಷ್ಠ ನಾಯಕರಿದ್ದಾರೆ. ಮೋದಿ, ಅಮಿತ್ ಷಾ ಯಾರು ಸ್ಪರ್ಧೆ ಮಾಡಬೇಕೆಂದು ನಿರ್ಧರಿಸುತ್ತಾರೆ ಎಂದರು. ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೋ ಅದೆಲ್ಲ ತನಿಖೆ ಆಗಬೇಕು. ಇದಕ್ಕೆ ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Udupi Shobha Karandlaje slams Chaitra Kundapura over fraud of Crores.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm