ಬ್ರೇಕಿಂಗ್ ನ್ಯೂಸ್
15-09-23 05:39 pm Udupi Correspondent ಕರಾವಳಿ
ಉಡುಪಿ, ಸೆ.15: ಚೈತ್ರಾ ಬಂಧನ ಆಗಿರುವುದನ್ನು ಮಾಧ್ಯಮದಲ್ಲಿ ತಿಳಿದುಕೊಂಡಿದ್ದೇನೆ. ಆಕೆಯ ಜೊತೆಗೆ ತನಗೇನೂ ಸಂಬಂಧ ಇಲ್ಲ. ನಾವು ಯಾರೂ ಆಕೆಯ ಬೆಂಬಲಕ್ಕೆ ನಿಂತಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ತಪ್ಪು ಮಾಡದೆ ಇದ್ದರೆ ಅನಾವಶ್ಯಕ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ನಿಷ್ಪಕ್ಷವಾಗಿ ತನಿಖೆಯಾಗಲಿ. ನೈಜ ಆರೋಪಿಗಳ ಬಂಧನ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಯೇ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ಹಾಗಂತ, ಸಂಬಂಧ ಇದೆಯೆಂದು ಅರ್ಥವಲ್ಲ.
ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಚೈತ್ರಾಗೆ ಟಿಕೆಟ್ ಎಂದು ಹೇಳಿಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರೂ ಅದಕ್ಕೆ ಬೆಲೆ ಇರಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ, ಎಲ್ಲಿ ಯಾರು ಸ್ಪರ್ಧೆ ಮಾಡಬೇಕು ಅಂತ. ನಮ್ಮ ಪಕ್ಷಕ್ಕೆ ಬಲಿಷ್ಠ ನಾಯಕರಿದ್ದಾರೆ. ಮೋದಿ, ಅಮಿತ್ ಷಾ ಯಾರು ಸ್ಪರ್ಧೆ ಮಾಡಬೇಕೆಂದು ನಿರ್ಧರಿಸುತ್ತಾರೆ ಎಂದರು. ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೋ ಅದೆಲ್ಲ ತನಿಖೆ ಆಗಬೇಕು. ಇದಕ್ಕೆ ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Udupi Shobha Karandlaje slams Chaitra Kundapura over fraud of Crores.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm