ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm