ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm