ಬ್ರೇಕಿಂಗ್ ನ್ಯೂಸ್
16-09-23 08:26 pm Mangalore Correspondent ಕರಾವಳಿ
ಮಂಗಳೂರು, ಸೆ.16: ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರಿನ ಕೊಟ್ಟಾರದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಶ್ ಬಿ.ಯು. (53) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಕೊಟ್ಟಾರದಲ್ಲಿರುವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ರಾಜೇಶ್ ಇಂದು ಮಧ್ಯಾಹ್ನ ಎದೆನೋವೆಂದು ಹೇಳಿ ಮಲಗಿದ್ದರು. ಕೂಡಲೇ ಇತರ ಸಿಬಂದಿ ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಿ, ಅವರನ್ನು ಆಟೋದಲ್ಲಿ ಎಜೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಸಹಜವಾಗಿದ್ದ ಅವರು ಮೊದಲ ಮಹಡಿಯಿಂದ ಕೆಳಗೆ ಇಳಿದು ಬಂದಿದ್ದಾರೆ. ಆಟೋದಲ್ಲಿದ್ದಾಗ ಆಸ್ಪತ್ರೆಗೆ ತೆರಳಿದ್ದ ತಾಯಿ ಜೊತೆಗೂ ಫೋನಲ್ಲಿ ಮಾತನಾಡಿದ್ದಾರೆ. ಎಜೆ ಆಸ್ಪತ್ರೆಯ ಹೊರಭಾಗದಲ್ಲಿ ಇಳಿಯುವ ವರೆಗೂ ಸಹಜ ಉಸಿರಾಟದಲ್ಲೇ ಇದ್ದರು. ಒಳಗೆ ಹೋದ ಕೆಲಹೊತ್ತಿನಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಮೂಲತಃ ವಾಮಂಜೂರು ನಿವಾಸಿಯಾಗಿದ್ದು ನಗರದ ಉರ್ವ ಮಾರಿಗುಡಿ ಬಳಿಯ ವೇಲ್ಸ್ ಪೇಟೆಯಲ್ಲಿ ಮನೆ ಹೊಂದಿದ್ದ ರಾಜೇಶ್ ಅವರ ಪತ್ನಿ ಪ್ರೇಮಾ ಮಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರಾರ್ ಹುದ್ದೆಯಲ್ಲಿದ್ದಾರೆ. ಏಕೈಕ ಮಗ ಎಂಸಿಎ ಕಲಿಯುತ್ತಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ ರಾಜೇಶ್, ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಮೂರು ವರ್ಷಗಳಿಂದ ಎಎಸ್ಐ ಆಗಿದ್ದು ಇದೇ ತಿಂಗಳಲ್ಲಿ ಎಸ್ಐ ಆಗಿ ಭಡ್ತಿ ಪಡೆಯಲಿದ್ದರು. ಪ್ರಮೋಷನ್ ಲಿಸ್ಟ್ ನಲ್ಲಿ ಅವರ ಹೆಸರಿತ್ತು ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ.
Police Intellegence departmemt ASI Rajesh dies of heart attack while on duty in Mangalore. He was a native of Vamamjoor in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm