ಬ್ರೇಕಿಂಗ್ ನ್ಯೂಸ್
16-09-23 08:26 pm Mangalore Correspondent ಕರಾವಳಿ
ಮಂಗಳೂರು, ಸೆ.16: ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರಿನ ಕೊಟ್ಟಾರದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಶ್ ಬಿ.ಯು. (53) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಕೊಟ್ಟಾರದಲ್ಲಿರುವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ರಾಜೇಶ್ ಇಂದು ಮಧ್ಯಾಹ್ನ ಎದೆನೋವೆಂದು ಹೇಳಿ ಮಲಗಿದ್ದರು. ಕೂಡಲೇ ಇತರ ಸಿಬಂದಿ ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಿ, ಅವರನ್ನು ಆಟೋದಲ್ಲಿ ಎಜೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಸಹಜವಾಗಿದ್ದ ಅವರು ಮೊದಲ ಮಹಡಿಯಿಂದ ಕೆಳಗೆ ಇಳಿದು ಬಂದಿದ್ದಾರೆ. ಆಟೋದಲ್ಲಿದ್ದಾಗ ಆಸ್ಪತ್ರೆಗೆ ತೆರಳಿದ್ದ ತಾಯಿ ಜೊತೆಗೂ ಫೋನಲ್ಲಿ ಮಾತನಾಡಿದ್ದಾರೆ. ಎಜೆ ಆಸ್ಪತ್ರೆಯ ಹೊರಭಾಗದಲ್ಲಿ ಇಳಿಯುವ ವರೆಗೂ ಸಹಜ ಉಸಿರಾಟದಲ್ಲೇ ಇದ್ದರು. ಒಳಗೆ ಹೋದ ಕೆಲಹೊತ್ತಿನಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಮೂಲತಃ ವಾಮಂಜೂರು ನಿವಾಸಿಯಾಗಿದ್ದು ನಗರದ ಉರ್ವ ಮಾರಿಗುಡಿ ಬಳಿಯ ವೇಲ್ಸ್ ಪೇಟೆಯಲ್ಲಿ ಮನೆ ಹೊಂದಿದ್ದ ರಾಜೇಶ್ ಅವರ ಪತ್ನಿ ಪ್ರೇಮಾ ಮಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರಾರ್ ಹುದ್ದೆಯಲ್ಲಿದ್ದಾರೆ. ಏಕೈಕ ಮಗ ಎಂಸಿಎ ಕಲಿಯುತ್ತಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ ರಾಜೇಶ್, ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಮೂರು ವರ್ಷಗಳಿಂದ ಎಎಸ್ಐ ಆಗಿದ್ದು ಇದೇ ತಿಂಗಳಲ್ಲಿ ಎಸ್ಐ ಆಗಿ ಭಡ್ತಿ ಪಡೆಯಲಿದ್ದರು. ಪ್ರಮೋಷನ್ ಲಿಸ್ಟ್ ನಲ್ಲಿ ಅವರ ಹೆಸರಿತ್ತು ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ.
Police Intellegence departmemt ASI Rajesh dies of heart attack while on duty in Mangalore. He was a native of Vamamjoor in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm