ಬ್ರೇಕಿಂಗ್ ನ್ಯೂಸ್
16-09-23 08:26 pm Mangalore Correspondent ಕರಾವಳಿ
ಮಂಗಳೂರು, ಸೆ.16: ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರಿನ ಕೊಟ್ಟಾರದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಶ್ ಬಿ.ಯು. (53) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಕೊಟ್ಟಾರದಲ್ಲಿರುವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ರಾಜೇಶ್ ಇಂದು ಮಧ್ಯಾಹ್ನ ಎದೆನೋವೆಂದು ಹೇಳಿ ಮಲಗಿದ್ದರು. ಕೂಡಲೇ ಇತರ ಸಿಬಂದಿ ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಿ, ಅವರನ್ನು ಆಟೋದಲ್ಲಿ ಎಜೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಸಹಜವಾಗಿದ್ದ ಅವರು ಮೊದಲ ಮಹಡಿಯಿಂದ ಕೆಳಗೆ ಇಳಿದು ಬಂದಿದ್ದಾರೆ. ಆಟೋದಲ್ಲಿದ್ದಾಗ ಆಸ್ಪತ್ರೆಗೆ ತೆರಳಿದ್ದ ತಾಯಿ ಜೊತೆಗೂ ಫೋನಲ್ಲಿ ಮಾತನಾಡಿದ್ದಾರೆ. ಎಜೆ ಆಸ್ಪತ್ರೆಯ ಹೊರಭಾಗದಲ್ಲಿ ಇಳಿಯುವ ವರೆಗೂ ಸಹಜ ಉಸಿರಾಟದಲ್ಲೇ ಇದ್ದರು. ಒಳಗೆ ಹೋದ ಕೆಲಹೊತ್ತಿನಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಮೂಲತಃ ವಾಮಂಜೂರು ನಿವಾಸಿಯಾಗಿದ್ದು ನಗರದ ಉರ್ವ ಮಾರಿಗುಡಿ ಬಳಿಯ ವೇಲ್ಸ್ ಪೇಟೆಯಲ್ಲಿ ಮನೆ ಹೊಂದಿದ್ದ ರಾಜೇಶ್ ಅವರ ಪತ್ನಿ ಪ್ರೇಮಾ ಮಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರಾರ್ ಹುದ್ದೆಯಲ್ಲಿದ್ದಾರೆ. ಏಕೈಕ ಮಗ ಎಂಸಿಎ ಕಲಿಯುತ್ತಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ ರಾಜೇಶ್, ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಮೂರು ವರ್ಷಗಳಿಂದ ಎಎಸ್ಐ ಆಗಿದ್ದು ಇದೇ ತಿಂಗಳಲ್ಲಿ ಎಸ್ಐ ಆಗಿ ಭಡ್ತಿ ಪಡೆಯಲಿದ್ದರು. ಪ್ರಮೋಷನ್ ಲಿಸ್ಟ್ ನಲ್ಲಿ ಅವರ ಹೆಸರಿತ್ತು ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ.
Police Intellegence departmemt ASI Rajesh dies of heart attack while on duty in Mangalore. He was a native of Vamamjoor in Mangalore.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm