ಬ್ರೇಕಿಂಗ್ ನ್ಯೂಸ್
09-11-20 08:20 pm Headline Karnataka News Network ಕರಾವಳಿ
ಮಂಗಳೂರು, ನವೆಂಬರ್ 9: ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸಮಸ್ಯೆಯ ಕುರಿತು ಶಾಸಕ ವೇದವ್ಯಾಸ್ ಕಾಮತ್ ಸ್ಪಂದಿಸಿದ್ದಾರೆ. ಸ್ಮಾರ್ಟ್ ಸಿಟಿ ಅಧಿಕಾರಿಗಳು, ಪೋಲಿಸ್ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು, ಕೆಯುಡಿಎಫ್ಸಿ ಇಲಾಖೆಯ ಅಧಿಕಾರಿಗಳು ಹಾಗೂ ಬಸ್ ಮಾಲಕರ ಸಂಘದ ಅದ್ಯಕ್ಷರೊಂದಿಗೆ ಸಭೆ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಶಾಸಕರು, ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದೇನೆ. ಪಿವಿಎಸ್ ಜಂಕ್ಷನ್ ನಿಂದ ನೇರವಾಗಿ ಕೆ.ಎಸ್ ರಾವ್ ರಸ್ತೆಗೆ ತೆರಳಲು ಅವಕಾಶ ಕಲ್ಪಿಸಿ ಕೊಡಬೇಕು. ಕೆ.ಎಸ್ ರಾವ್ ರಸ್ತೆಯಿಂದ ಹಳೆಯ ಸರ್ವಿಸ್ ಬಸ್ ಸ್ಟಾಂಡ್, ಮುಲ್ಕಿ ಸುಂದರ್ ರಾಮ್ ಶೆಟ್ಟಿ ರಸ್ತೆ (ಲೈಟ್ ಹೌಸ್ ಹಿಲ್ ರಸ್ತೆ) ಸಂಪರ್ಕ ಒದಗಿಸುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸಲಾಗಿದೆ ಎಂದರು.



ಅದೇ ರೀತಿ ಕೆ.ಎಸ್ ರಾವ್ ರಸ್ತೆಯ ಮೂಲಕ ಬರುವ ವಾಹನಗಳು ವಿ.ಟಿ ರಸ್ತೆಗೆ ತಿರುಗಲು ಹಾಗೂ ಶರವು ದೇವಸ್ಥಾನ ರಸ್ತೆಯಿಂದ ಜಿ.ಎಚ್.ಎಸ್ ರಸ್ತೆಯ ಮೂಲಕ ಕ್ಲಾಕ್ ಟವರ್ ತೆರಳಲು ಅವಕಾಶ ಕಲ್ಪಿಸಿಕೊಡಬೇಕು. ಸ್ಟೇಟ್ ಬ್ಯಾಂಕ್ ಪರಿಸರದಿಂದ ಬರುವ ವಾಹನಗಳಿಗೆ ಹಂಪನಕಟ್ಟೆ, ಕೆ.ಎಸ್ ರಾವ್ ರಸ್ತೆ, ಯೆನಪೋಯ ಆಸ್ಪತ್ರೆಯ ಮೂಲಕ ತೆರಳಲು ಅವಕಾಶ ಕಲ್ಪಿಸಲಾಗುತ್ತದೆ. ಅಥವಾ ಕೆ.ಎಸ್ ರಾವ್ ರಸ್ತೆಯಿಂದ ಹಳೇ ಸರ್ವಿಸ್ ಬಸ್ ಸ್ಟ್ಯಾಂಡ್ ಮೂಲಕ ಮುಲ್ಕಿ ಸುಂದರ್ ರಾಮ್ ಶೆಟ್ಟಿ ರಸ್ತೆಯ ಮೂಲಕ ಹೋಗಲು ಅವಕಾಶ ನೀಡಲಾಗುತ್ತದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಅದೇ ರೀತಿ ಶಾರದಾ ವಿದ್ಯಾಲಯ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಈಗಾಗಲೇ ಪ್ರಗತಿ ಹಂತದಲ್ಲಿರುವ ಬಂದರ್ ಪ್ರದೇಶದಲ್ಲಿ ರಾತ್ರಿಯ ವೇಳೆ ಕಾಮಗಾರಿ ನಡೆಸಿ ಹಗಲು ಹೊತ್ತಿನಲ್ಲಿ ಸಂಚಾರಕ್ಕೆ ತೊಡಕಾಗದಂತೆ ಕಾರ್ಯ ನಿರ್ವಹಿಸಲು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಾಳೆಯಿಂದ ಜನರಿಗೆ ಸಮಸ್ಯೆಯಾಗದಂತೆ ಮತ್ತು ಟ್ರಾಫಿಕ್ ಸಮಸ್ಯೆ ಉದ್ಭವಿಸದಂತೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೂ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರಾದ ಪ್ರೇಮಾನಂದ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಬೋಳೂರು, ಪೂರ್ಣಿಮಾ ಎಂ, ಸಹಾಯಕ ಆಯುಕ್ತರಾದ ಮದನ್ ಮೋಹನ್, ಸಂಚಾರಿ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತರಾದ ನಟರಾಜ್, ಸಂಚಾರ ಪಶ್ಚಿಮ ಪೊಲೀಸ್ ಠಾಣೆ ನಿರೀಕ್ಷಕರಾದ ಜಯಾನಂದ, ಬಸ್ ಮಾಲಕರ ಸಂಘದ ಅಧ್ಯಕ್ಷರಾದ ದಿಲ್ ರಾಜ್ ಆಳ್ವ, ಸ್ಮಾರ್ಟ್ ಸಿಟಿ ಅಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಕೆಯುಡಿಎಫ್ಸಿ ಅಧಿಕಾರಿಗಳು, ನಾಗರಿಕ ಹಿತರಕ್ಷಣಾ ಸಮಿತಿಯ ಹನುಮಂತ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.
MLA Vedavyas Kamath called for meeting with Traffic Authorities and corporation after huge traffic block that occurred due to diversion of the road in Hampankatta, Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am