ಬ್ರೇಕಿಂಗ್ ನ್ಯೂಸ್
19-09-23 01:10 pm Mangalore Correspondent ಕರಾವಳಿ
ಮಂಗಳೂರು, ಸೆ.19: ಭಾರೀ ವಿವಾದಕ್ಕೆ ಒಳಗಾಗಿದ್ದ ಮಂಗಳೂರು ವಿವಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಯ ಉಪಕುಲಪತಿ ಜಯರಾಜ್ ಅಮೀನ್ ಅವರೇ ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದ್ದಾರೆ.
ಸಕಲ ಧಾರ್ಮಿಕ ವಿಧಿಗಳೊಂದಿಗೆ ಸ್ವತಃ ಗಣೇಶ ಮೂರ್ತಿಯನ್ನು ವಿಸಿ ಅವರೇ ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದಾರೆ. ವಿವಿಯ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು. ಸಣ್ಣ ಮಟ್ಟದ ಗಣೇಶ ಮೂರ್ತಿಯನ್ನು ಪ್ರತಿಷ್ಠೆ ಮಾಡಿದ್ದರು ಬಳಿಕ ಪೂಜೆ ಸಲ್ಲಿಸಿದ್ದಾರೆ.





ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು.
ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
Mangalore University Ganesha idol established, pooja held by Vice Chancellor
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm