ಬ್ರೇಕಿಂಗ್ ನ್ಯೂಸ್
19-09-23 01:10 pm Mangalore Correspondent ಕರಾವಳಿ
ಮಂಗಳೂರು, ಸೆ.19: ಭಾರೀ ವಿವಾದಕ್ಕೆ ಒಳಗಾಗಿದ್ದ ಮಂಗಳೂರು ವಿವಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ. ವಿವಿಯ ಉಪಕುಲಪತಿ ಜಯರಾಜ್ ಅಮೀನ್ ಅವರೇ ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದ್ದಾರೆ.
ಸಕಲ ಧಾರ್ಮಿಕ ವಿಧಿಗಳೊಂದಿಗೆ ಸ್ವತಃ ಗಣೇಶ ಮೂರ್ತಿಯನ್ನು ವಿಸಿ ಅವರೇ ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದಾರೆ. ವಿವಿಯ ವಿದ್ಯಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ, ಸ್ಥಳೀಯರು ಭಾಗಿಯಾಗಿದ್ದರು. ಸಣ್ಣ ಮಟ್ಟದ ಗಣೇಶ ಮೂರ್ತಿಯನ್ನು ಪ್ರತಿಷ್ಠೆ ಮಾಡಿದ್ದರು ಬಳಿಕ ಪೂಜೆ ಸಲ್ಲಿಸಿದ್ದಾರೆ.





ಅರ್ಚಕರ ಸಮ್ಮುಖದಲ್ಲಿ ಪಂಚೆ, ಶಾಲು ತೊಟ್ಟು ಧಾರ್ಮಿಕ ವಿಧಿಗಳನ್ನು ಸ್ವತಃ ವಿಸಿಯವರೇ ನೆರವೇರಿಸಿದ್ದಾರೆ. ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶನ ಉತ್ಸವ ಮಾಡಿದ್ದು ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿತ್ತು. ಉತ್ತರ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
ಮಂಗಳಾ ಆಡಿಟೋರಿಯಂನಲ್ಲಿ ಗಣೇಶೋತ್ಸವ ಮಾಡಲೇಬೇಕೆಂದು ಬಿಜೆಪಿ ಮತ್ತು ಸಂಘ ಪರಿವಾರ ಪಟ್ಟು ಹಿಡಿದಿದ್ದರಿಂದ ವಿವಾದ ಉಂಟಾಗಿತ್ತು. ಹಾಸ್ಟೆಲ್ ವ್ಯಾಪ್ತಿಯಲ್ಲಿ ಸಣ್ಣ ಮಟ್ಟಿಗೆ ಮಾತ್ರ ಗಣೇಶೋತ್ಸವ ಸಾಕು ಎನ್ನುವುದು ವಿಸಿಯವರ ಇಂಗಿತ ಆಗಿತ್ತು. ವಿವಾದ ಏರ್ಪಟ್ಟಿದ್ದರಿಂದ ಸಂಘ ಪರಿವಾರ ಪ್ರತಿಭಟನಾ ಸಭೆ ನಡೆಸಿ, ನೀವು ಮಾಡದಿದ್ದರೆ ನಾವೇ ಆ ಕೆಲಸ ಮಾಡ್ತೀವಿ ಎಂದು ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದು ಬಿಸಿ ಮುಟ್ಟುವಂತಾಗಿತ್ತು. ಇದರಿಂದಾಗಿ ಗಣೇಶೋತ್ಸವ ಬಗ್ಗೆ ಕುತೂಹಲವೂ ಉಂಟಾಗಿತ್ತು. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಂಟ್ರಿ ಗೇಟ್ ಸೇರಿ ಸುತ್ತಮುತ್ತ ಸರ್ಪಗಾವಲು ಹಾಕಿದ್ದರು.
ಇಂದು ವಿಸಿಯವರೇ ಸರಳ ರೀತಿಯಲ್ಲಿ ಮಂಗಳಾ ಆಡಿಟೋರಿಯಂನಲ್ಲೇ ಗಣೇಶನನ್ನು ಪ್ರತಿಷ್ಟಾಪಿಸಿ ಪೂಜೆ ನೆರವೇರಿಸಿದ್ದು ವಿವಾದ ಮಾಡಿದವರಿಗೆ ತಿರುಗೇಟು ನೀಡಿದ್ದಾರೆ.
Mangalore University Ganesha idol established, pooja held by Vice Chancellor
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm