ಬ್ರೇಕಿಂಗ್ ನ್ಯೂಸ್
19-09-23 01:26 pm Udupi Correspondent ಕರಾವಳಿ
ಉಡುಪಿ, ಸೆ.19: ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೂಂದು ವಂಚನೆ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬ್ರಹ್ಮಾವರ ತಾಲೂಕು ಕೋಡಿಕನ್ಯಾಣ ನಿವಾಸಿ ಸುದೀನ ಅವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ ಸುಮಾರು 5 ಲಕ್ಷ ರೂ. ಪಡೆದು ಹಣವನ್ನು ಮರಳಿಸದೆ ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.
ತಾನು ಮೀನು ವ್ಯಾಪಾರವನ್ನು ನಡೆಸಿಕೊಂಡು ಬಂದಿದ್ದು, 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ತಾನು ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿದ್ದು, ಹಲವು ಮಂತ್ರಿಗಳ, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ತಿಳಿಸಿ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು. ಬಳಿಕ ಚೈತ್ರಾ ಕುಂದಾಪುರ ಪದೇ ಪದೇ ಕರೆ ಮಾಡಿ ಸುದೀನ ಅವರಿಂದ 2018ರಿಂದ 2022ರ ವರೆಗೆ ಸುಮಾರು ಐದು ಲಕ್ಷ ರೂ. ಪಡೆದಿದ್ದಾಳೆ.
ಸುಮಾರು ಮೂರು ಲಕ್ಷ ಹಣವನ್ನು ಸುದೀನ ತನ್ನ ಖಾತೆ ಹೊಂದಿದ ವಿಜಯವಾಡ ಶಾಖೆಯ ಕೋಟಕ್ ಮಹಿಂದ್ರ ಬ್ಯಾಂಕ್ ಹಾಗೂ ಕರ್ಣಾಟಕ ಬ್ಯಾಂಕ್ ಸಾಸ್ತಾನ ಶಾಖೆಯ ಖಾತೆಯಿಂದ ಚೈತ್ರಾಳ ಖಾತೆಗೆ ವರ್ಗಾಯಿಸಿದ್ದರು. ಇನ್ನುಳಿದ ಮೊತ್ತವನ್ನು ನಗದಾಗಿ 2023ರ ತನಕ ಆಕೆಗೆ ನೀಡಿದ್ದರು.
ಅನಂತರದ ದಿನಗಳಲ್ಲಿ ಆಕೆ ಚುನಾವಣ ಪ್ರಚಾರ, ವಿವಿಧೆಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವುಗಳನ್ನು ನೆಪವಾಗಿರಿಸಿ ದಿನಗಳನ್ನು ಮುಂದೂಡುತ್ತ ಬರುತ್ತಿದ್ದು, ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚೈತ್ರಾಳ ಬಗ್ಗೆ ಅನುಮಾನಗೊಂಡ ಸುದೀನ ಅವರು ಕೂಡಲೇ ಬಟ್ಟೆ ಅಂಗಡಿಯನ್ನು ಹಾಕಿ ಕೊಡುವಂತೆ ಅಥವಾ ತಾನು ನೀಡಿದ ಹಣವನ್ನು ಸಂಪೂರ್ಣ ವಾಪಸು ನೀಡುವಂತೆ ಕೇಳಿಕೊಂಡಿದ್ದರು. ಆಗ ಚೈತ್ರಾ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಳು. ಅಲ್ಲದೆ, ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
Chaitra Kundapura fraud case, another case filed at Kota police station, Chaitra cheats man of 5 lakhs.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm