ಬ್ರೇಕಿಂಗ್ ನ್ಯೂಸ್
19-09-23 01:26 pm Udupi Correspondent ಕರಾವಳಿ
ಉಡುಪಿ, ಸೆ.19: ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೂಂದು ವಂಚನೆ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಬ್ರಹ್ಮಾವರ ತಾಲೂಕು ಕೋಡಿಕನ್ಯಾಣ ನಿವಾಸಿ ಸುದೀನ ಅವರಿಗೆ ಬಟ್ಟೆ ಅಂಗಡಿ ಹಾಕಿಕೊಡುವುದಾಗಿ ನಂಬಿಸಿ ಸುಮಾರು 5 ಲಕ್ಷ ರೂ. ಪಡೆದು ಹಣವನ್ನು ಮರಳಿಸದೆ ಜೀವ ಬೆದರಿಕೆ ಹಾಕಿ ವಂಚಿಸಿ, ವಿಶ್ವಾಸ ದ್ರೋಹ ಎಸಗಿರುವುದಾಗಿ ದೂರಲಾಗಿದೆ.
ತಾನು ಮೀನು ವ್ಯಾಪಾರವನ್ನು ನಡೆಸಿಕೊಂಡು ಬಂದಿದ್ದು, 2015ರಲ್ಲಿ ಚೈತ್ರಾ ಕುಂದಾಪುರ ಪರಿಚಯವಾಗಿತ್ತು. ತಾನು ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿದ್ದು, ಹಲವು ಮಂತ್ರಿಗಳ, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ತಿಳಿಸಿ ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು. ಬಳಿಕ ಚೈತ್ರಾ ಕುಂದಾಪುರ ಪದೇ ಪದೇ ಕರೆ ಮಾಡಿ ಸುದೀನ ಅವರಿಂದ 2018ರಿಂದ 2022ರ ವರೆಗೆ ಸುಮಾರು ಐದು ಲಕ್ಷ ರೂ. ಪಡೆದಿದ್ದಾಳೆ.
ಸುಮಾರು ಮೂರು ಲಕ್ಷ ಹಣವನ್ನು ಸುದೀನ ತನ್ನ ಖಾತೆ ಹೊಂದಿದ ವಿಜಯವಾಡ ಶಾಖೆಯ ಕೋಟಕ್ ಮಹಿಂದ್ರ ಬ್ಯಾಂಕ್ ಹಾಗೂ ಕರ್ಣಾಟಕ ಬ್ಯಾಂಕ್ ಸಾಸ್ತಾನ ಶಾಖೆಯ ಖಾತೆಯಿಂದ ಚೈತ್ರಾಳ ಖಾತೆಗೆ ವರ್ಗಾಯಿಸಿದ್ದರು. ಇನ್ನುಳಿದ ಮೊತ್ತವನ್ನು ನಗದಾಗಿ 2023ರ ತನಕ ಆಕೆಗೆ ನೀಡಿದ್ದರು.
ಅನಂತರದ ದಿನಗಳಲ್ಲಿ ಆಕೆ ಚುನಾವಣ ಪ್ರಚಾರ, ವಿವಿಧೆಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವುಗಳನ್ನು ನೆಪವಾಗಿರಿಸಿ ದಿನಗಳನ್ನು ಮುಂದೂಡುತ್ತ ಬರುತ್ತಿದ್ದು, ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಚೈತ್ರಾಳ ಬಗ್ಗೆ ಅನುಮಾನಗೊಂಡ ಸುದೀನ ಅವರು ಕೂಡಲೇ ಬಟ್ಟೆ ಅಂಗಡಿಯನ್ನು ಹಾಕಿ ಕೊಡುವಂತೆ ಅಥವಾ ತಾನು ನೀಡಿದ ಹಣವನ್ನು ಸಂಪೂರ್ಣ ವಾಪಸು ನೀಡುವಂತೆ ಕೇಳಿಕೊಂಡಿದ್ದರು. ಆಗ ಚೈತ್ರಾ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿದ್ದಳು. ಅಲ್ಲದೆ, ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
Chaitra Kundapura fraud case, another case filed at Kota police station, Chaitra cheats man of 5 lakhs.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm