ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
08-04-26 08:44 pm
HK News Staffer
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm