ಬ್ರೇಕಿಂಗ್ ನ್ಯೂಸ್
21-09-23 10:11 pm Mangalore Correspondent ಕರಾವಳಿ
ಉಳ್ಳಾಲ, ಸೆ.21: ಮಂಜನಾಡಿ ನಿವಾಸಿ ಯುವಕನಿಗೆ ಕೇರಳದ 25 ಕೋಟಿ ರೂ. ಲಾಟರಿ ಒಲಿದಿರುವ ಸುದ್ದಿ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಯುವಕನಿಗೆ ಅಭಿನಂದನೆ ಹೇಳಿ ಸ್ನೇಹಿತರು ಫೋನ್ ಮಾಡಲೆತ್ನಿಸಿದಾಗ ಅಸಲಿಯತ್ತು ಹೊರಬಿದ್ದಿದೆ.
ಮಂಜನಾಡಿ ಮೊಂಟೆಪದವು ನಿವಾಸಿ ಆಸೀಫ್ ಎಂಬವರಿಗೆ ಸೆ.20ರಂದು ಡ್ರಾಗೊಂಡಿದ್ದ 25 ಕೋಟಿ ಲಾಟರಿ ಒಲಿದಿರುವುದಾಗಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಹರಿದಾಡಿತ್ತು. ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿರುವ ಆಸೀಫ್, ನಿನ್ನೆ ಊರಿಗೆ ಕಾರಿನಲ್ಲಿ ಬರುತ್ತಿದ್ದಾಗ ಮೊಬೈಲ್ ಗೆ ಕರೆಗಳ ಮೇಲೆ ಕರೆಗಳು ಬರುತ್ತಲೇ ಇತ್ತು. ಕರೆ ಸ್ವೀಕರಿಸುತ್ತಿದ್ದಂತೆ ಶುಭಾಶಯಗಳ ಸರಮಾಲೆಯೇ ಬರುತಿತ್ತು. ಹೆಚ್ಚು ವಿಚಾರಿಸುತ್ತಿದ್ದಂತೆಯೇ, ರೂ. 25 ಕೋಟಿ ಲಾಟರಿ ಟಿಕೆಟ್ ಒಲಿದಿರುವುದಾಗಿ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಕೇರಳ ಲಾಟರಿಯನ್ನೇ ಖರೀದಿಸದ ನನಗೆ ಹೇಗೆ 25 ಕೋಟಿ ಒಲಿಯುವುದು ಎಂದು ತನ್ನಷ್ಟಕ್ಕೆ ಆಸಿಫ್ ಮೌನವಾಗಿದ್ದರು. ಹೀಗೆ ರಾತ್ರಿ ವರೆಗೂ ಕರೆಗಳು ನಿರಂತರವಾಗಿ ಬರುತ್ತಲೇ ಇದ್ದವು. ಇವರ ಮೌನದಿಂದಾಗಿ ಕೋಟಿ ಗೆದ್ದಿರುವುದು ಖಾತ್ರಿಯಾದ ಜನರು ಮೆಸೇಜ್, ಫೋನ್ ಮಾಡುತ್ತಲೇ ಇದ್ದರು. ನಿಜವಾಗಿಯೂ ಲಾಟರಿ ಒಲಿಯುತ್ತಿದ್ದರೆ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸ್ ಠಾಣೆಯಲ್ಲಿ ಕೂರಬೇಕಿತ್ತು.
ಈ ಕುರಿತು ಆಸೀಫ್ ಸ್ನೇಹಿತರಲ್ಲಿ ವಿಚಾರಿಸಿದಾಗ, ವಾಟ್ಸ್ ಆ್ಯಪ್ ಲಿಂಕ್ ಬರುತ್ತಿದ್ದು, ಅದನ್ನು ಬಳಸಿ ತಮ್ಮ ಸ್ನೇಹಿತರ ಭಾವಚಿತ್ರ ಹಾಗೂ ಹೆಸರನ್ನು ಹಾಕಿ ಮಜಾ ತೆಗೆದುಕೊಳ್ಳುವ ಪರಿಪಾಠ ನಡೆಯುತ್ತಿರುವುದು ತಿಳಿದುಬಂದಿದೆ. ಈ ಹಿಂದೆಯೂ ಇಂತಹದ್ದೇ ಪ್ರಕರಣ ನಡೆದಿರುವ ಬಗ್ಗೆ ಕೆಲವರು ಹೇಳುತ್ತಿದ್ದಾರೆ.
Mangalore Manjanady youth wins 25 crore lottery, goes viral on social media.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm