ಬ್ರೇಕಿಂಗ್ ನ್ಯೂಸ್
22-09-23 06:02 pm Mangalore Correspondent ಕರಾವಳಿ
ಉಳ್ಳಾಲ, ಸೆ.22: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರಕ್ಕೆ ಚಿಕಿತ್ಸೆಗೆಂದು ತೆರಳಿದ್ದ ತಾಯಿ, ಮಗಳಿಗೆ ಶಿಲೀಂದ್ರ ಲೇಪಿತ ಮಾತ್ರೆಗಳನ್ನು ನೀಡಿದ ಘಟನೆ ನಡೆದಿದ್ದು, ದೂರಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ತಕ್ಷಣ ಅಲ್ಲಿಗೆ ನೀಡಿರುವ ಪ್ಯಾರಾ ಸಿಟಮಾಲ್ ಮಾತ್ರೆಗಳನ್ನ ಹಿಂಪಡೆದಿದ್ದಾರೆ.
ಕೋಟೆಕಾರು, ಬೀರಿ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿನ್ನೆ ಮಧ್ಯಾಹ್ನ ಕೆ.ಸಿ ನಗರ ನಿವಾಸಿ ಮಹಿಳೆಯೊಬ್ಬರು ತನ್ನ ಆರನೇ ತರಗತಿಯ ಮಗಳು ರಾಫಿಯಾ ಜೊತೆ ಜ್ವರಕ್ಕೆ ಚಿಕಿತ್ಸೆ ಪಡೆಯಲು ತೆರಳಿದ್ದರು. ಇಬ್ಬರನ್ನೂ ಪರೀಕ್ಷೆ ನಡೆಸಿದ ವೈದ್ಯರು ಎರಡು ದಿವಸಗಳ ಔಷಧಿಗಳನ್ನ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಔಷಧಿ ಸೇವಿಸಲು ಮುಂದಾದಾಗ ಪ್ಯಾರಾ ಸಿಟಮಾಲ್ ಮಾತ್ರೆಯ ಬಣ್ಣ ಬದಲಾಗಿ ಶಿಲೀಂದ್ರ ಆವರಿಸಿತ್ತು. ಈ ಬಗ್ಗೆ ವಿಚಾರಿಸಿದಾಗ ಆರೋಗ್ಯ ಕೇಂದ್ರದ ಸಿಬ್ಬಂದಿ ಎಲ್ಲಾ ಮಾತ್ರೆಗಳು ಹೀಗೇ ಇವೆ, ಏನಾಗುವುದಿಲ್ಲವೆಂದು ಬಾಲಿಶ ಉತ್ತರ ನೀಡಿದ್ದರಂತೆ.
ಆನಂತರ ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶಿಲೀಂದ್ರ ಆವರಿಸಿದ್ದ ಮಾತ್ರೆಯ ವೀಡಿಯೋ ತೆಗೆದು ಜಿಲ್ಲಾ ಆರೋಗ್ಯಾಧಿಕಾರಿಯ ವಾಟ್ಸಪ್ ಕಳಿಸಿದ್ದಾರೆ. ತಕ್ಷಣ ಸ್ಪಂದನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್ ತಿಮ್ಮಯ್ಯ, ಕೋಟೆಕಾರು ಆರೋಗ್ಯ ಕೇಂದ್ರಕ್ಕೆ ನೀಡಿರುವ ಪ್ಯಾರಸೆಟಮೋಲ್ ಮಾತ್ರೆಗಳನ್ನು ಹಿಂದಕ್ಕೆ ತರಿಸಿಕೊಂಡಿದ್ದಾರೆ.
ಹೆಡ್ ಲೈನ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿದ ಅವರು ಎರಡು ಬ್ಯಾಚ್ ನ ಪ್ಯಾರಾಸೆಟಮೋಲ್ ಮಾತ್ರೆಗಳಲ್ಲಿ ಕೆಲವು ಸ್ಟ್ರಿಪ್ ಗಳ ಮಾತ್ರೆಗಳಿಗೆ ಶಿಲೀಂದ್ರ ಆವರಿಸಿದೆ. 2025 ರ ಜನವರಿ ತಿಂಗಳ ವರೆಗೆ ಮಾತ್ರೆಗಳು ಬಳಕೆಗೆ ಯೋಗ್ಯವಾಗಿದ್ದರೂ ಮಾತ್ರೆಗಳ ವಿತರಣೆಯನ್ನ ನಿಲ್ಲಿಸಿ ಎಲ್ಲವನ್ನು ಹಿಂಪಡೆದಿದ್ದು ಅದನ್ನ ಬೆಂಗಳೂರಿಗೆ ಪರೀಕ್ಷೆಗೆ ಕಳಿಸಲಾಗುವುದು. ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ಯಾರ ಸೆಟಮೋಲ್ ಮಾತ್ರೆಗಳನ್ನ ಹಿಂಪಡೆದು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
Kotekar health care hospital negligence, DHO alerts in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm