ಬ್ರೇಕಿಂಗ್ ನ್ಯೂಸ್
22-09-23 06:02 pm Mangalore Correspondent ಕರಾವಳಿ
ಉಳ್ಳಾಲ, ಸೆ.22: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರಕ್ಕೆ ಚಿಕಿತ್ಸೆಗೆಂದು ತೆರಳಿದ್ದ ತಾಯಿ, ಮಗಳಿಗೆ ಶಿಲೀಂದ್ರ ಲೇಪಿತ ಮಾತ್ರೆಗಳನ್ನು ನೀಡಿದ ಘಟನೆ ನಡೆದಿದ್ದು, ದೂರಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ತಕ್ಷಣ ಅಲ್ಲಿಗೆ ನೀಡಿರುವ ಪ್ಯಾರಾ ಸಿಟಮಾಲ್ ಮಾತ್ರೆಗಳನ್ನ ಹಿಂಪಡೆದಿದ್ದಾರೆ.
ಕೋಟೆಕಾರು, ಬೀರಿ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿನ್ನೆ ಮಧ್ಯಾಹ್ನ ಕೆ.ಸಿ ನಗರ ನಿವಾಸಿ ಮಹಿಳೆಯೊಬ್ಬರು ತನ್ನ ಆರನೇ ತರಗತಿಯ ಮಗಳು ರಾಫಿಯಾ ಜೊತೆ ಜ್ವರಕ್ಕೆ ಚಿಕಿತ್ಸೆ ಪಡೆಯಲು ತೆರಳಿದ್ದರು. ಇಬ್ಬರನ್ನೂ ಪರೀಕ್ಷೆ ನಡೆಸಿದ ವೈದ್ಯರು ಎರಡು ದಿವಸಗಳ ಔಷಧಿಗಳನ್ನ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಔಷಧಿ ಸೇವಿಸಲು ಮುಂದಾದಾಗ ಪ್ಯಾರಾ ಸಿಟಮಾಲ್ ಮಾತ್ರೆಯ ಬಣ್ಣ ಬದಲಾಗಿ ಶಿಲೀಂದ್ರ ಆವರಿಸಿತ್ತು. ಈ ಬಗ್ಗೆ ವಿಚಾರಿಸಿದಾಗ ಆರೋಗ್ಯ ಕೇಂದ್ರದ ಸಿಬ್ಬಂದಿ ಎಲ್ಲಾ ಮಾತ್ರೆಗಳು ಹೀಗೇ ಇವೆ, ಏನಾಗುವುದಿಲ್ಲವೆಂದು ಬಾಲಿಶ ಉತ್ತರ ನೀಡಿದ್ದರಂತೆ.
ಆನಂತರ ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶಿಲೀಂದ್ರ ಆವರಿಸಿದ್ದ ಮಾತ್ರೆಯ ವೀಡಿಯೋ ತೆಗೆದು ಜಿಲ್ಲಾ ಆರೋಗ್ಯಾಧಿಕಾರಿಯ ವಾಟ್ಸಪ್ ಕಳಿಸಿದ್ದಾರೆ. ತಕ್ಷಣ ಸ್ಪಂದನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್ ತಿಮ್ಮಯ್ಯ, ಕೋಟೆಕಾರು ಆರೋಗ್ಯ ಕೇಂದ್ರಕ್ಕೆ ನೀಡಿರುವ ಪ್ಯಾರಸೆಟಮೋಲ್ ಮಾತ್ರೆಗಳನ್ನು ಹಿಂದಕ್ಕೆ ತರಿಸಿಕೊಂಡಿದ್ದಾರೆ.
ಹೆಡ್ ಲೈನ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿದ ಅವರು ಎರಡು ಬ್ಯಾಚ್ ನ ಪ್ಯಾರಾಸೆಟಮೋಲ್ ಮಾತ್ರೆಗಳಲ್ಲಿ ಕೆಲವು ಸ್ಟ್ರಿಪ್ ಗಳ ಮಾತ್ರೆಗಳಿಗೆ ಶಿಲೀಂದ್ರ ಆವರಿಸಿದೆ. 2025 ರ ಜನವರಿ ತಿಂಗಳ ವರೆಗೆ ಮಾತ್ರೆಗಳು ಬಳಕೆಗೆ ಯೋಗ್ಯವಾಗಿದ್ದರೂ ಮಾತ್ರೆಗಳ ವಿತರಣೆಯನ್ನ ನಿಲ್ಲಿಸಿ ಎಲ್ಲವನ್ನು ಹಿಂಪಡೆದಿದ್ದು ಅದನ್ನ ಬೆಂಗಳೂರಿಗೆ ಪರೀಕ್ಷೆಗೆ ಕಳಿಸಲಾಗುವುದು. ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ಯಾರ ಸೆಟಮೋಲ್ ಮಾತ್ರೆಗಳನ್ನ ಹಿಂಪಡೆದು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
Kotekar health care hospital negligence, DHO alerts in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm