ಬ್ರೇಕಿಂಗ್ ನ್ಯೂಸ್
22-09-23 06:02 pm Mangalore Correspondent ಕರಾವಳಿ
ಉಳ್ಳಾಲ, ಸೆ.22: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜ್ವರಕ್ಕೆ ಚಿಕಿತ್ಸೆಗೆಂದು ತೆರಳಿದ್ದ ತಾಯಿ, ಮಗಳಿಗೆ ಶಿಲೀಂದ್ರ ಲೇಪಿತ ಮಾತ್ರೆಗಳನ್ನು ನೀಡಿದ ಘಟನೆ ನಡೆದಿದ್ದು, ದೂರಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ತಕ್ಷಣ ಅಲ್ಲಿಗೆ ನೀಡಿರುವ ಪ್ಯಾರಾ ಸಿಟಮಾಲ್ ಮಾತ್ರೆಗಳನ್ನ ಹಿಂಪಡೆದಿದ್ದಾರೆ.
ಕೋಟೆಕಾರು, ಬೀರಿ ಬಳಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಿನ್ನೆ ಮಧ್ಯಾಹ್ನ ಕೆ.ಸಿ ನಗರ ನಿವಾಸಿ ಮಹಿಳೆಯೊಬ್ಬರು ತನ್ನ ಆರನೇ ತರಗತಿಯ ಮಗಳು ರಾಫಿಯಾ ಜೊತೆ ಜ್ವರಕ್ಕೆ ಚಿಕಿತ್ಸೆ ಪಡೆಯಲು ತೆರಳಿದ್ದರು. ಇಬ್ಬರನ್ನೂ ಪರೀಕ್ಷೆ ನಡೆಸಿದ ವೈದ್ಯರು ಎರಡು ದಿವಸಗಳ ಔಷಧಿಗಳನ್ನ ನೀಡಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಔಷಧಿ ಸೇವಿಸಲು ಮುಂದಾದಾಗ ಪ್ಯಾರಾ ಸಿಟಮಾಲ್ ಮಾತ್ರೆಯ ಬಣ್ಣ ಬದಲಾಗಿ ಶಿಲೀಂದ್ರ ಆವರಿಸಿತ್ತು. ಈ ಬಗ್ಗೆ ವಿಚಾರಿಸಿದಾಗ ಆರೋಗ್ಯ ಕೇಂದ್ರದ ಸಿಬ್ಬಂದಿ ಎಲ್ಲಾ ಮಾತ್ರೆಗಳು ಹೀಗೇ ಇವೆ, ಏನಾಗುವುದಿಲ್ಲವೆಂದು ಬಾಲಿಶ ಉತ್ತರ ನೀಡಿದ್ದರಂತೆ.
ಆನಂತರ ಮಾಜಿ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶಿಲೀಂದ್ರ ಆವರಿಸಿದ್ದ ಮಾತ್ರೆಯ ವೀಡಿಯೋ ತೆಗೆದು ಜಿಲ್ಲಾ ಆರೋಗ್ಯಾಧಿಕಾರಿಯ ವಾಟ್ಸಪ್ ಕಳಿಸಿದ್ದಾರೆ. ತಕ್ಷಣ ಸ್ಪಂದನೆ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿ ಎಚ್.ಆರ್ ತಿಮ್ಮಯ್ಯ, ಕೋಟೆಕಾರು ಆರೋಗ್ಯ ಕೇಂದ್ರಕ್ಕೆ ನೀಡಿರುವ ಪ್ಯಾರಸೆಟಮೋಲ್ ಮಾತ್ರೆಗಳನ್ನು ಹಿಂದಕ್ಕೆ ತರಿಸಿಕೊಂಡಿದ್ದಾರೆ.
ಹೆಡ್ ಲೈನ್ ಕರ್ನಾಟಕಕ್ಕೆ ಪ್ರತಿಕ್ರಿಯೆ ನೀಡಿದ ಅವರು ಎರಡು ಬ್ಯಾಚ್ ನ ಪ್ಯಾರಾಸೆಟಮೋಲ್ ಮಾತ್ರೆಗಳಲ್ಲಿ ಕೆಲವು ಸ್ಟ್ರಿಪ್ ಗಳ ಮಾತ್ರೆಗಳಿಗೆ ಶಿಲೀಂದ್ರ ಆವರಿಸಿದೆ. 2025 ರ ಜನವರಿ ತಿಂಗಳ ವರೆಗೆ ಮಾತ್ರೆಗಳು ಬಳಕೆಗೆ ಯೋಗ್ಯವಾಗಿದ್ದರೂ ಮಾತ್ರೆಗಳ ವಿತರಣೆಯನ್ನ ನಿಲ್ಲಿಸಿ ಎಲ್ಲವನ್ನು ಹಿಂಪಡೆದಿದ್ದು ಅದನ್ನ ಬೆಂಗಳೂರಿಗೆ ಪರೀಕ್ಷೆಗೆ ಕಳಿಸಲಾಗುವುದು. ಜಿಲ್ಲೆಯ ಉಳಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ಯಾರ ಸೆಟಮೋಲ್ ಮಾತ್ರೆಗಳನ್ನ ಹಿಂಪಡೆದು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
Kotekar health care hospital negligence, DHO alerts in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm