ಬ್ರೇಕಿಂಗ್ ನ್ಯೂಸ್
23-09-23 02:22 pm Mangalore Correspondent ಕರಾವಳಿ
ಮಂಗಳೂರು, ಸೆ.23: ಎತ್ತಿನಹೊಳೆ ಯೋಜನೆ ಮುಗಿದ ಅಧ್ಯಾಯ, ಹಳೆ ವಿಚಾರವನ್ನು ಪ್ರಶ್ನೆ ಕೇಳಬೇಡಿ ಎಂದು ಮಾಜಿ ಸಚಿವ ವೀರಪ್ಪ ಮೊಯ್ಲಿ ಪತ್ರಕರ್ತರ ಪ್ರಶ್ನೆಗೆ ಸಿಡುಕಿನ ಉತ್ತರ ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮೊಯ್ಲಿ ಅವರಲ್ಲಿ ಎತ್ತಿನಹೊಳೆ ಯೋಜನೆಯನ್ನು ನೀವು ತರಾತುರಿಯಲ್ಲಿ ಆರಂಭಿಸಿದ್ದಿರಿ, ಈಗ ಅದರಿಂದಾಗಿ ಕರಾವಳಿಗೇ ಬರ ಬಂದಿದೆ, ಈಗಲಾದರೂ ನೀವು ನಿಲ್ಲಿಸಲು ಹೇಳುತ್ತೀರಾ ಎಂಬ ಪ್ರಶ್ನೆಗೆ, ಅದೆಲ್ಲ ಹಳೆ ವಿಚಾರ, ಪ್ರತಿ ಬಾರಿ ಆ ಕುರಿತು ಪ್ರಶ್ನೆ ಮಾಡಬೇಡಿ ಎಂದಿದ್ದಾರೆ.


ಯೋಜನೆ ಜಾರಿಗೆ ನೀವು ಮತ್ತು ಸದಾನಂದ ಗೌಡ ಕಾರಣಕರ್ತರು, ಯಾಕೆ ಪ್ರಶ್ನೆ ಮಾಡಬಾರದು, ಅದಕ್ಕೆ 23 ಸಾವಿರ ಕೋಟಿ ದುಡ್ಡು ಖರ್ಚು ಮಾಡಿದ್ದೀರಲ್ಲಾ ಎಂದು ಕೇಳಿದ್ದಕ್ಕೆ, ಬಿಜೆಪಿಯವರು ಯೋಜನೆ ನಿಲ್ಲಿಸಿದ್ದಾರೆಯೇ.. ನಾವು ಯಾಕೆ ನಿಲ್ಲಿಸಬೇಕು. ಇದಕ್ಕೆಲ್ಲ ಉತ್ತರ ನೀಡಲ್ಲ ಎಂದರು. ನೀವು ಕರಾವಳಿ ಜನರಿಗೆ ಉತ್ತರ ಕೊಡಲೇಬೇಕು ಎಂದಾಗ, ನಾನು ಎಲ್ಲಿ ಉತ್ತರ ಕೊಡಬೇಕೋ ಅಲ್ಲಿಯೇ ಕೊಡುತ್ತೇನೆ ಎಂದು ಮೌನಕ್ಕೆ ಜಾರಿದರು. ನೀವು ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡುತ್ತೀರಂತೆ, ಅಲ್ಲಿನ ಜನರಿಗೂ ಉತ್ತರ ಕೊಡಬೇಕಾಗುತ್ತದೆ ಎಂದಾಗ, ಅದು ಆ ಪ್ರಶ್ನೆ ಬಂದಾಗ ಉತ್ತರ ಕೊಡುತ್ತೇನೆ ಎಂದು ನಕ್ಕರು.
ಎತ್ತಿನಹೊಳೆ ಯೋಜನೆಯಿಂದ ಒಂದು ಹನಿ ನೀರೂ ಕಳಿಸೋಕೆ ಆಗಿಲ್ಲ, 20 ಸಾವಿರ ಖರ್ಚು ಮಾಡಿದ್ದೀರಿ ಎಂದಾಗ, ನೀವೇ ಒಂದೆಡೆ ನೀರು ಹರಿಸಿಲ್ಲ ಅಂತೀರಿ. ಇಲ್ಲಿ ನೀರಿಲ್ಲ, ಬರಡಾಗಿದೆ ಅಂತೀರಿ. ನೀರೇ ಹರಿಸಿಲ್ಲಾಂದ್ರೆ, ನೀರು ಖಾಲಿಯಾಗೋದು ಹೇಗಾಗುತ್ತೆ. ಈಗ ಯೋಜನೆ ಕಾಮಗಾರಿ ಆಗುತ್ತಾ ಇದೆ. ನಿಮ್ಮಲ್ಲೇ ಪ್ರಶ್ನೆ, ಉತ್ತರ ಎರಡೂ ಇದೆ ಎಂದರು ಮೊಯ್ಲಿ. ನೀವು ಯೋಜನೆ ವೈಫಲ್ಯದ ಬಗ್ಗೆ ಉತ್ತರ ಕೊಡಬೇಕು ಎಂದು ಮತ್ತೆ ಕೇಳಿದ್ದಕ್ಕೆ, ನಾನು ಉತ್ತರ ಕೊಡುತ್ತೇನೆ, ನಿಮಗೆ ಕೊಡಬೇಕಿಲ್ಲ ಎಂದು ಸಿಡುಕು ತೋರಿದರು. ಪದೇ ಪದೇ ಆ ಕುರಿತು ಪ್ರಶ್ನೆ ಕೇಳಿದ್ದರಿಂದ ಸಿಡಿಮಿಡಿಗೊಂಡ ಮೊಯ್ಲಿ, ನಾನು ಬೇಕಾದಲ್ಲಿ ಉತ್ತರ ಕೊಡುತ್ತೇನೆ ಎನ್ನುತ್ತಲೇ ಮುಖ ತಿರುಗಿಸಿ ಕುಳಿತುಬಿಟ್ಟರು.
2013ರಲ್ಲಿ ಆಗ ಚಿಕ್ಕಬಳ್ಳಾಪುರ ಸಂಸದರಾಗಿದ್ದ ವೀರಪ್ಪ ಮೊಯ್ಲಿ ತರಾತುರಿಯಲ್ಲಿ ಎತ್ತಿನಹೊಳೆ ಯೋಜನೆಗೆ ಚಿಕ್ಕಬಳ್ಳಾಪುರದಲ್ಲೇ ಶಿಲಾನ್ಯಾಸ ಮಾಡಿದ್ದರು. ಕರಾವಳಿ ಜನರ ಭಾರೀ ವಿರೋಧ ಮಧ್ಯೆಯೇ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದ್ದರು. ಈವರೆಗೆ ಯೋಜನೆಗೆ 23 ಸಾವಿರ ಕೋಟಿ ಖರ್ಚಾಗಿದೆ ಎಂದು ಸರಕಾರ ಲೆಕ್ಕ ಹೇಳುತ್ತಿದ್ದು, ಒಂದು ಹನಿ ನೀರನ್ನೂ ಒಯ್ಯಲು ಸಾಧ್ಯವಾಗಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳು ಜನರ ದುಡ್ಡನ್ನು ಬೇಕಾಬಿಟ್ಟಿ ಖರ್ಚು ಮಾಡಿ, ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎನ್ನುವ ಗಂಭೀರ ಆರೋಪವನ್ನು ಜನರೇ ಮಾಡುತ್ತಿದ್ದಾರೆ.
Yetthinahole project is a finished story, Journalists in Managlore slam Veerappa Moily.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm