ಬ್ರೇಕಿಂಗ್ ನ್ಯೂಸ್
24-09-23 04:51 pm Mangalore Correspondent ಕರಾವಳಿ
ಮಂಗಳೂರು, ಸೆ.24: ಪ್ರಣವಾನಂದ ಸ್ವಾಮೀಜಿ ನಮ್ಮ ಸಮುದಾಯದ ನಾಯಕ ಅಲ್ಲ, ಸುಮ್ಮನೆ ಬುರುಡೆ ಬಿಟ್ಟುಕೊಂಡು ಓಡಾಡಿದ್ರೆ ನಾಯಕ ಆಗಲ್ಲ ಎಂದು ಶಿಕ್ಷಣ ಸಚಿವ, ಈಡಿಗ ಜನಾಂಗದ ನಾಯಕ ಮಧು ಬಂಗಾರಪ್ಪ ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪ್ರಣವಾನಂದ ಸ್ವಾಮೀಜಿ ಬಗ್ಗೆ ಶಿವಮೊಗ್ಗದಲ್ಲಿ ಈಡಿಗ ಸಂಘದವರು ವಿರೋಧ ವ್ಯಕ್ತಪಡಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆ ವ್ಯಕ್ತಿಯನ್ನೂ ನಾನೂ ವಿರೋಧಿಸುತ್ತೇನೆ. ನಮ್ಮ ಈಡಿಗ, ಬಿಲ್ಲವ ಸಮಾಜಕ್ಕೆ ಸೇರಿದ ವ್ಯಕ್ತಿಯಲ್ಲ. ನಮ್ಮ ಸಮಾಜ ಆತನನ್ನು ಈಡಿಗ ಸಮುದಾಯದ ಸ್ವಾಮೀಜಿ ಎಂದು ಒಪ್ಪಿಕೊಂಡಿಲ್ಲ. ಸುಮ್ನೆ ಬುರುಡೆ ಬಿಟ್ಕೊಂಡು ಪ್ರಚಾರ ಪಡೆಯೋದಷ್ಟೆ ಆತನ ಕಾಯಕ. ಯಾರೇ ಆಗಲಿ, ಸಮಾಜವನ್ನು ದಾರಿ ತಪ್ಪಿಸುತ್ತಾನಂದ್ರೆ, ಅಂಥವರನ್ನು ಕಟ್ ಮಾಡಬೇಕು. ನಾನು ಇವರನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇಂಥವರನ್ನು ಹೇಟ್ ಮಾಡ್ತೀನಿ ಎಂದರು.



ಚುನಾವಣೆ ಸಮಯದಲ್ಲಿ ಪ್ರಣವಾನಂದ ಪಾದಯಾತ್ರೆ ಮಾಡಿದಾಗ ನೀವ್ಯಾರೂ ಅಲ್ಲಗಳೆಯುವ ಕೆಲಸ ಮಾಡಿಲ್ಲ ಎಂದು ಕೇಳಿದ್ದಕ್ಕೆ, ನಾನು ವೈಯಕ್ತಿಕವಾಗಿ ಆತನನ್ನು ಚುನಾವಣೆ ಲಾಭಕ್ಕೆ ಬಳಸಿಕೊಂಡಿಲ್ಲ. ಪ್ರಚಾರಕ್ಕೋಸ್ಕರ ಕಿಡಿಗೇಡಿ ರೀತಿ ಮಾಡ್ತಾರೆ. ಬಿಕೆ ಹರಿಪ್ರಸಾದ್ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಟ್ಟುಕೊಂಡಿರುವ ವ್ಯಕ್ತಿ. ಅವರೇನು ಹೇಳಿದರೂ, ಪ್ರಣವಾನಂದ ಪರವಾಗಿ ಅಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಎರಡು ಸಾವಿರದಷ್ಟು ಪಬ್ಲಿಕ್ ಶಾಲೆಗಳನ್ನು ತೆರೆಯಲಿದ್ದು, ಆಮೂಲಕ ಎಲ್ಕೆಜಿಯಿಂದ ಹಿಡಿದು ಪಿಯುಸಿ ವರೆಗೆ ಗುಣಮಟ್ಟದ ಶಿಕ್ಷಣ ಬಡವರಿಗೆ ಸಿಗುವಂತೆ ಮಾಡುತ್ತೇನೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ತಲಾ ಮೂರು ಶಾಲೆಗಳನ್ನು ತೆರೆಯಲಿದ್ದು, ಮುಂದಿನ ವರ್ಷವೇ 300 ಶಾಲೆ ಅಸ್ತಿತ್ವಕ್ಕೆ ಬರಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.
Karnataka Education Minister Madhu Bangarappa has said that Pranavananda Swamiji is not the leader of our community and if he just walks around with his skull, he will not become a leader.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm