ಬ್ರೇಕಿಂಗ್ ನ್ಯೂಸ್
10-11-20 02:03 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 10 : ಮಂಗಳೂರು ನಗರದಲ್ಲಿ ಏಕಾಏಕಿ ರಸ್ತೆ ಕಾಮಗಾರಿ ನಡೆಸುವ ಮೂಲಕ ಬಿಜೆಪಿ ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆಯೇ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಮಿಥುನ್ ರೈ, ಮಂಗಳೂರಲ್ಲಿ ಏಕಾಏಕಿ ರಸ್ತೆ ಕಾಮಗಾರಿ ಆರಂಭಿಸಲಾಗಿದ್ದು ಇದರಿಂದ ಬಡ ವ್ಯಾಪಾರಿಗಳಿಗೆ ತೊಂದರೆಯಾಗಿದೆ. ಕೊರೊನಾ ಆಘಾತದ ಬಳಿಕ ಜನರಿಗೆ ರಸ್ತೆ ಕಾಮಗಾರಿ ನೆಪದಲ್ಲಿ ಮತ್ತೊಂದು ಹೊಡೆತ ನೀಡಲಾಗಿದೆ. ಯಾರ ಒತ್ತಡಕ್ಕೆ ಒಳಗಾಗಿ ಏಕಾಏಕಿ ಕಾಮಗಾರಿ ಆರಂಭಿಸಲಾಗಿದೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಜನರಿಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.
ರಸ್ತೆ ಕಾಮಗಾರಿ ವಿಚಾರದಲ್ಲಿ ಅನುಭವದ ಕೊರತೆ ಎದ್ದು ಕಾಣುತ್ತಿದೆ. ಮರದ ರೆಂಬೆಯ ಮೇಲೆ ಕುಳಿತು ಮರ ಕಡಿಯುವ ಕೆಲಸ ಮಾಡುತ್ತಿದ್ದಾರೆ. ಒಂದೇ ಸಮಯದಲ್ಲಿ ಎಲ್ಲ ಕಡೆ ಅಗೆದು ಹಾಕಿದ್ದಾರೆ. ಅತ್ತ ಕಾರ್ ಸ್ಟ್ರೀಟ್, ಬಂದರು, ಹಂಪನಕಟ್ಟೆ ಹೀಗೆ ಎಲ್ಲ ಕಡೆ ಅಗೆದು ಬಂದ್ ಮಾಡಿದರೆ ಅಲ್ಲಿನ ನಿವಾಸಿಗಳು ಎಲ್ಲಿ ಹೋಗಬೇಕು? ಅಲ್ಲಿನ ಬೀದಿಬದಿ ವ್ಯಾಪಾರಿಗಳು, ರಿಕ್ಷಾ ಚಾಲಕರು ಏನು ಮಾಡಬೇಕು ಅಲ್ಲಿನ ಜನರ ಪ್ರಶ್ನೆಗೆ, ಯಾರು ಉತ್ತರ ಕೊಡುತ್ತಾರೆ. ಜನರು ನಡೆದು ಹೋಗುವುದಕ್ಕೂ ಆಗದ ಪರಿಸ್ಥಿತಿ ಅಲ್ಲಿ ಉಂಟಾಗಿದೆ. ಈ ಸ್ಥಿತಿಗೆ ಇಲ್ಲಿನ ಬಿಜೆಪಿ ಶಾಸಕರೇ ಕಾರಣ. ಈ ಕೂಡಲೇ ದ.ಕ. ಜಿಲ್ಲಾಧಿಕಾರಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ, ಕಾಮಗಾರಿ ಬಗ್ಗೆ ಸ್ಪಷ್ಟ ವಿವರ ನೀಡಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ.
ಮಾಜಿ ಶಾಸಕ ಜೆ.ಆರ್.ಲೋಬೊ, ಮನಪಾ ವಿಪಕ್ಷ ನಾಯಕ ಅಬ್ದುಲ್ ರವೂಫ್, ಕಾರ್ಪೊರೇಟರ್ ಗಳಾದ ಶಶಿಧರ ಹೆಗ್ಡೆ, ಎ.ಸಿ.ವಿನಯರಾಜ್, ನವೀನ್ ಡಿಸೋಜ ಉಪಸ್ಥಿತರಿದ್ದರು.
The BJP leaders of Mangaluru are ruling like Tuglaks after creating havoc in the city by Diversion of Road in Hampankatta slammed Youth Congress Leader Mithun Rai in Mangalore.
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 02:26 pm
Mangalore Correspondent
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm