ಬ್ರೇಕಿಂಗ್ ನ್ಯೂಸ್
25-09-23 05:22 pm Mangalore Correspondent ಕರಾವಳಿ
ಉಳ್ಳಾಲ, ಸೆ.25: ರೈಲಿನಡಿಗೆ ಬಿದ್ದು ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ರೈಲ್ವೇ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದ್ದು, ಛಿದ್ರಗೊಂಡ ಮೃತದೇಹ ರೈಲಿನಡಿಯಲ್ಲಿ ಸಿಲುಕಿದ ಹಿನ್ನೆಲೆಯಲ್ಲಿ ರೈಲನ್ನು ನಿಲ್ಲಿಸಿ ಹೊರ ತೆಗೆಯಲಾಗಿದೆ.
ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಆತ್ಮಹತ್ಯೆಗೈದ ಯುವಕ. ಆದಿತ್ಯವಾರ ಸಂಜೆ ಮನೆಯಿಂದ ಹೊರಟ ಪ್ರಶಾಂತ್ ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರಲ್ಲಿ ಬಂದ ಪ್ರಶಾಂತ್ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ಹಳಿಯಲ್ಲಿ ನಡೆದುಕೊಂಡು ಹೋಗಿ ರೈಲಿನಡಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆ. ಅವಿವಾಹಿತರಾಗಿದ್ದ ಪ್ರಶಾಂತ್ ಪಾನಮತ್ತರಾಗಿ ಕೃತ್ಯವನ್ನು ಎಸಗಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ಐ ಮಧುಚಂದ್ರ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.

ತುರ್ತು ನಿಲುಗಡೆಯಾದ ರೈಲು!
ಆದಿತ್ಯವಾರ ರಾತ್ರಿ 8.15 ರ ಸುಮಾರಿಗೆ ಘಟನೆ ನಡೆದಿದೆ. ಪೋರ್ ಬಂದರ್ - ಕೊಚ್ಚುವೆಲಿ ನಡುವೆ ಸಂಚರಿಸುವ ರೈಲಿನಡಿಗೆ ಬಿದ್ದು ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಸೋಮೇಶ್ವರ, ಉಚ್ಚಿಲ ಗೇಟ್ ದಾಟುತ್ತಿದ್ದಂತೆ ಬೋಗಿಯಡಿ ಶಬ್ದ ಕೇಳಿಬಂದಿದ್ದು, ದುರ್ವಾಸನೆ ಇರುವುದನ್ನು ಗಮನಿಸಿದ ಉಚ್ಚಿಲ ಸ್ಟೇಷನ್ ಮಾಸ್ಟರ್, ತಕ್ಷಣ ರೈಲಿನ ಲೋಕೊ ಪೈಲೆಟ್ ಗೆ ಮಾಹಿತಿಯನ್ನು ರವಾನಿಸಿದ್ದಾರೆ. ಉಚ್ಚಿಲ ಗೇಟ್ ನಿಂದ 2 ಕಿಮೀ ದೂರ ಚಲಿಸಿದ್ದ ರೈಲಿನಡಿ ಛಿದ್ರಗೊಂಡ ಮೃತದೇಹ ಸಿಲುಕಿಕೊಂಡಿತ್ತು. ತಕ್ಷಣ ಲೋಕೊಪೈಲಟ್ ರೈಲನ್ನ ತುರ್ತಾಗಿ ನಿಲ್ಲಿಸಿದ್ದಾರೆ. ಬೋಗಿಗಳಡಿ ಛಿದ್ರವಾಗಿ ಚಕ್ರಗಳಿಗೆ ಸಿಲುಕಿದ್ದ ಮೃತದೇಹದ ಮಾಂಸ ಖಂಡಗಳನ್ನ ಕ್ಷಿಪ್ರವಾಗಿ ತೆರವುಗೊಳಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿ ರೈಲು ಸುಗಮ ಸಂಚಾರಕ್ಕೆ ರೈಲ್ವೇ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
44 year old commits suicide by falling to speeding train at Ullal in Mangalore, train stopped to remove body pieces. The deceased has been identified as Prashanth from Konchady.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm